ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

ಬೆಳ್ತಂಗಡಿ: ತನಗರಿವಿಲ್ಲದ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ನಲ್ಲಿ ಎರಡು ಲಕ್ಷ ಮೌಲ್ಯದ ಚಿನ್ನದ ಬ್ರೇಸ್ ಲೆಟ್ ಕಳೆದುಕೊಂಡಿದ್ದ ದಂಪತಿಗೆ, ಅದು ಬಿದ್ದು ಸಿಕ್ಕಿದ್ದ ಯುವಕ ಮರಳಿಸಿ ಪ್ರಾಮಾಣಿಕ ಮೆರೆದಿದ್ದಾರೆ.

ಕುವೆಟ್ಟು ಗ್ರಾಮದ ಬದ್ಯಾರ್ ನಿವಾಸಿ ಸಲೀಂ ಎಂಬವರ ಪುತ್ರ ಝೈನುದ್ದೀನ್ ಅವರೇ ಮಾದರಿ ವ್ಯಕ್ತಿತ್ವ ತೋರಿದ ಯುವಕ.
ರಿಕ್ಷಾ ಚಾಲಕರಾಗಿರುವ ಅವರಿಗೆ ಈ ಆಭರಣ ಸಿಕ್ಕಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ಸ್ಥಳೀಯವಾಗಿ ಹಲವರ ಮೊಬೈಲ್ ಸ್ಟೇಟಸ್ ನಲ್ಲಿ ಈ ಚಿನ್ನ ಕಳೆದುಹೋಗಿರುವ ಬಗ್ಗೆ ಸಂದೇಶಗಳು ಹರಿದಾಡುತ್ತಿತ್ತು. ಅದನ್ನು ಗಮನಿಸಿದ ತಕ್ಷಣ ಆ ನಂಬರ್ ಗೆ ಕರೆ ಮಾಡಿದಾಗ ಅದು ಸಿದ್ದೀಕ್ ಎಂಬವರ ಪತ್ನಿ ಫರ್ಝಾನ ಅವರು ಬದ್ಯಾರ್ ನ ತಾಯಿ ಮನೆಯಿಂದ ಪತಿಯ ಮನೆ ಮಲೆಬೆಟ್ಟು ಇಲ್ಲಿಗೆ ಹೋಗುವ ವೇಳೆ ಕಳೆದುಕೊಂಡಿದ್ದೆಂದು ಖಚಿತಪಡಿಸಿ ಅವರಿಗೆ ಈ‌ ಆಭರಣವನ್ನು ಹಸ್ತಾಂತರಿಸಿದರು.

ಝೈನುದ್ದೀನ್ ಅವರ ಈ ಪ್ರಾಮಣಿಕತೆಯನ್ನು ಮೆಚ್ಚಿ ಸಿದ್ದೀಕ್ ಅವರು ಝೈನುದ್ದೀನ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮಹಮ್ಮದ್ ಹನೀಫ್ ಉಜಿರೆ, ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಾಶಿಪಟ್ಣ ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya
error: Content is protected !!