25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

ಬೆಳ್ತಂಗಡಿ: ತನಗರಿವಿಲ್ಲದ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ನಲ್ಲಿ ಎರಡು ಲಕ್ಷ ಮೌಲ್ಯದ ಚಿನ್ನದ ಬ್ರೇಸ್ ಲೆಟ್ ಕಳೆದುಕೊಂಡಿದ್ದ ದಂಪತಿಗೆ, ಅದು ಬಿದ್ದು ಸಿಕ್ಕಿದ್ದ ಯುವಕ ಮರಳಿಸಿ ಪ್ರಾಮಾಣಿಕ ಮೆರೆದಿದ್ದಾರೆ.

ಕುವೆಟ್ಟು ಗ್ರಾಮದ ಬದ್ಯಾರ್ ನಿವಾಸಿ ಸಲೀಂ ಎಂಬವರ ಪುತ್ರ ಝೈನುದ್ದೀನ್ ಅವರೇ ಮಾದರಿ ವ್ಯಕ್ತಿತ್ವ ತೋರಿದ ಯುವಕ.
ರಿಕ್ಷಾ ಚಾಲಕರಾಗಿರುವ ಅವರಿಗೆ ಈ ಆಭರಣ ಸಿಕ್ಕಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ಸ್ಥಳೀಯವಾಗಿ ಹಲವರ ಮೊಬೈಲ್ ಸ್ಟೇಟಸ್ ನಲ್ಲಿ ಈ ಚಿನ್ನ ಕಳೆದುಹೋಗಿರುವ ಬಗ್ಗೆ ಸಂದೇಶಗಳು ಹರಿದಾಡುತ್ತಿತ್ತು. ಅದನ್ನು ಗಮನಿಸಿದ ತಕ್ಷಣ ಆ ನಂಬರ್ ಗೆ ಕರೆ ಮಾಡಿದಾಗ ಅದು ಸಿದ್ದೀಕ್ ಎಂಬವರ ಪತ್ನಿ ಫರ್ಝಾನ ಅವರು ಬದ್ಯಾರ್ ನ ತಾಯಿ ಮನೆಯಿಂದ ಪತಿಯ ಮನೆ ಮಲೆಬೆಟ್ಟು ಇಲ್ಲಿಗೆ ಹೋಗುವ ವೇಳೆ ಕಳೆದುಕೊಂಡಿದ್ದೆಂದು ಖಚಿತಪಡಿಸಿ ಅವರಿಗೆ ಈ‌ ಆಭರಣವನ್ನು ಹಸ್ತಾಂತರಿಸಿದರು.

ಝೈನುದ್ದೀನ್ ಅವರ ಈ ಪ್ರಾಮಣಿಕತೆಯನ್ನು ಮೆಚ್ಚಿ ಸಿದ್ದೀಕ್ ಅವರು ಝೈನುದ್ದೀನ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮಹಮ್ಮದ್ ಹನೀಫ್ ಉಜಿರೆ, ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಾಶಿಪಟ್ಣ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!