July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

ಬೆಳ್ತಂಗಡಿ: ತನಗರಿವಿಲ್ಲದ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ನಲ್ಲಿ ಎರಡು ಲಕ್ಷ ಮೌಲ್ಯದ ಚಿನ್ನದ ಬ್ರೇಸ್ ಲೆಟ್ ಕಳೆದುಕೊಂಡಿದ್ದ ದಂಪತಿಗೆ, ಅದು ಬಿದ್ದು ಸಿಕ್ಕಿದ್ದ ಯುವಕ ಮರಳಿಸಿ ಪ್ರಾಮಾಣಿಕ ಮೆರೆದಿದ್ದಾರೆ.

ಕುವೆಟ್ಟು ಗ್ರಾಮದ ಬದ್ಯಾರ್ ನಿವಾಸಿ ಸಲೀಂ ಎಂಬವರ ಪುತ್ರ ಝೈನುದ್ದೀನ್ ಅವರೇ ಮಾದರಿ ವ್ಯಕ್ತಿತ್ವ ತೋರಿದ ಯುವಕ.
ರಿಕ್ಷಾ ಚಾಲಕರಾಗಿರುವ ಅವರಿಗೆ ಈ ಆಭರಣ ಸಿಕ್ಕಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ಸ್ಥಳೀಯವಾಗಿ ಹಲವರ ಮೊಬೈಲ್ ಸ್ಟೇಟಸ್ ನಲ್ಲಿ ಈ ಚಿನ್ನ ಕಳೆದುಹೋಗಿರುವ ಬಗ್ಗೆ ಸಂದೇಶಗಳು ಹರಿದಾಡುತ್ತಿತ್ತು. ಅದನ್ನು ಗಮನಿಸಿದ ತಕ್ಷಣ ಆ ನಂಬರ್ ಗೆ ಕರೆ ಮಾಡಿದಾಗ ಅದು ಸಿದ್ದೀಕ್ ಎಂಬವರ ಪತ್ನಿ ಫರ್ಝಾನ ಅವರು ಬದ್ಯಾರ್ ನ ತಾಯಿ ಮನೆಯಿಂದ ಪತಿಯ ಮನೆ ಮಲೆಬೆಟ್ಟು ಇಲ್ಲಿಗೆ ಹೋಗುವ ವೇಳೆ ಕಳೆದುಕೊಂಡಿದ್ದೆಂದು ಖಚಿತಪಡಿಸಿ ಅವರಿಗೆ ಈ‌ ಆಭರಣವನ್ನು ಹಸ್ತಾಂತರಿಸಿದರು.

ಝೈನುದ್ದೀನ್ ಅವರ ಈ ಪ್ರಾಮಣಿಕತೆಯನ್ನು ಮೆಚ್ಚಿ ಸಿದ್ದೀಕ್ ಅವರು ಝೈನುದ್ದೀನ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮಹಮ್ಮದ್ ಹನೀಫ್ ಉಜಿರೆ, ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಾಶಿಪಟ್ಣ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!