26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

ಬೆಳ್ತಂಗಡಿ: ತನಗರಿವಿಲ್ಲದ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ನಲ್ಲಿ ಎರಡು ಲಕ್ಷ ಮೌಲ್ಯದ ಚಿನ್ನದ ಬ್ರೇಸ್ ಲೆಟ್ ಕಳೆದುಕೊಂಡಿದ್ದ ದಂಪತಿಗೆ, ಅದು ಬಿದ್ದು ಸಿಕ್ಕಿದ್ದ ಯುವಕ ಮರಳಿಸಿ ಪ್ರಾಮಾಣಿಕ ಮೆರೆದಿದ್ದಾರೆ.

ಕುವೆಟ್ಟು ಗ್ರಾಮದ ಬದ್ಯಾರ್ ನಿವಾಸಿ ಸಲೀಂ ಎಂಬವರ ಪುತ್ರ ಝೈನುದ್ದೀನ್ ಅವರೇ ಮಾದರಿ ವ್ಯಕ್ತಿತ್ವ ತೋರಿದ ಯುವಕ.
ರಿಕ್ಷಾ ಚಾಲಕರಾಗಿರುವ ಅವರಿಗೆ ಈ ಆಭರಣ ಸಿಕ್ಕಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ಸ್ಥಳೀಯವಾಗಿ ಹಲವರ ಮೊಬೈಲ್ ಸ್ಟೇಟಸ್ ನಲ್ಲಿ ಈ ಚಿನ್ನ ಕಳೆದುಹೋಗಿರುವ ಬಗ್ಗೆ ಸಂದೇಶಗಳು ಹರಿದಾಡುತ್ತಿತ್ತು. ಅದನ್ನು ಗಮನಿಸಿದ ತಕ್ಷಣ ಆ ನಂಬರ್ ಗೆ ಕರೆ ಮಾಡಿದಾಗ ಅದು ಸಿದ್ದೀಕ್ ಎಂಬವರ ಪತ್ನಿ ಫರ್ಝಾನ ಅವರು ಬದ್ಯಾರ್ ನ ತಾಯಿ ಮನೆಯಿಂದ ಪತಿಯ ಮನೆ ಮಲೆಬೆಟ್ಟು ಇಲ್ಲಿಗೆ ಹೋಗುವ ವೇಳೆ ಕಳೆದುಕೊಂಡಿದ್ದೆಂದು ಖಚಿತಪಡಿಸಿ ಅವರಿಗೆ ಈ‌ ಆಭರಣವನ್ನು ಹಸ್ತಾಂತರಿಸಿದರು.

ಝೈನುದ್ದೀನ್ ಅವರ ಈ ಪ್ರಾಮಣಿಕತೆಯನ್ನು ಮೆಚ್ಚಿ ಸಿದ್ದೀಕ್ ಅವರು ಝೈನುದ್ದೀನ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮಹಮ್ಮದ್ ಹನೀಫ್ ಉಜಿರೆ, ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ಶಾಫಿ ಕಾಶಿಪಟ್ಣ ಉಪಸ್ಥಿತರಿದ್ದರು.

Related posts

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya
error: Content is protected !!