July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅ. 20 ರಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು ಬಿಜೆಪಿ ಯುವ ಮೋರ್ಚಾ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದೀಜಿಯವರು ಗುಜರಾತ್ ಹಾಗೂ ಭಾರತದ ಆಡಳಿತ ಚುಕ್ಕಾಣಿ ಹಿಡಿದು 25ನೇ ವರ್ಷ ಆರಂಭವಾಗುವ ಸವಿನೆನಪಿಗಾಗಿ ಅದೇ ದಿನ ಪೂರ್ವಾಹ್ನ 8.00 ಗಂಟೆಗೆ ನಮೋ‌ ಮ್ಯಾರಥಾನ್ ಓಟ ವಾಣಿ ಶಿಕ್ಷಣ ಸಂಸ್ಥೆಗಳ ಬಳಿಯಿಂದ ಆರಂಭಗೊಂಡು ಬಸ್ ನಿಲ್ದಾಣದವರೆಗೆ ನಡೆಯಲಿದೆ. ಬಳಿಕ ಗಣ್ಯರ ಉಪಸ್ಥಿತಿಯಲ್ಲಿ ತಾಲೂಕಿನ ಮನೆ ಹಬ್ಬವಾದ ದೋಸೆಹಬ್ಬಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಸಾಯಂಕಾಲದವರೆಗೆ ನಡೆಯಲಿದ್ದು, ಮಕ್ಕಳ ಹುಲಿವೇಷ ಸ್ಪರ್ಧೆ ಬಾಲೆ ಪಿಲಿ ಸಂಜೆ 6ರ ಗೋಧೋಳಿ ಮುಹೂರ್ತದಲ್ಲಿ ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ರಾತ್ರಿ ಭಜರಂಗ ಬಲಿ ನಾಟಕ ಪ್ರದರ್ಶನವೂ ಜರಗಲಿದೆ.

ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಜಿಲ್ಲಾ ಬಿಜೆಪಿ ಮುಖಂಡರು, ಸಂಸದರು, ಶಾಸಕರೂ ಸೇರಿದಂತೆ ಹಲವು ಗಣ್ಯರು ಭಾಗಿಯಾಗುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಆಗಮಿಸಿ ದೋಸೆ ಸವಿದು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

Related posts

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya
error: Content is protected !!