25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

ಮುಂಡಾಜೆ : ಇಲ್ಲಿಯ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ಅ.14ರಂದು ನಡೆದಿದೆ.


ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.


ಈ ಹಿಂದೆ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ ಕಾರಣ ಆಕ್ಷೇಪ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಆದರೆ ಇದೀಗ ಮೋರಿ ಸಂಪೂರ್ಣ ಕುಸಿದು ಬಿದ್ದಿದ್ದು ಸದ್ಯ ತಾತ್ಕಾಲಿಕ ಸಂಪರ್ಕವೂ ಇಲ್ಲದಂತಾಗಿದೆ. ಇಲ್ಲಿ ಮೋರಿ ನಿರ್ಮಾಣಕ್ಕೆ ಖಾಸಗಿಯವರ ಆಕ್ಷೇಪ ಇರುವ ಕಾರಣ ಸಂಪರ್ಕಕ್ಕೆ ಮುಂದಿನ ಯೋಜನೆ ಏನು ಎಂಬುದು ಕಾದು ನೋಡಬೇಕಾಗಿದೆ.

ಸ್ಥಳಕ್ಕೆ ಪಂಚಾಯಿತಿ ಆಡಳಿತ ಮಂಡಳಿ ತೆರಳಿ ಪರಿಶೀಲನೆ ನಡೆಸಿದ್ದು ತಾತ್ಕಾಲಿಕ ಸಂಪರ್ಕ ಕಲ್ಪಿಸಿ ಕೊಡುವ ಭರವಸೆ ನೀಡಿದೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya
error: Content is protected !!