July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

ಮುಂಡಾಜೆ : ಇಲ್ಲಿಯ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ಅ.14ರಂದು ನಡೆದಿದೆ.


ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.


ಈ ಹಿಂದೆ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ ಕಾರಣ ಆಕ್ಷೇಪ ವ್ಯಕ್ತವಾಗಿತ್ತು ಎಂದು ಹೇಳಲಾಗಿದೆ. ಆದರೆ ಇದೀಗ ಮೋರಿ ಸಂಪೂರ್ಣ ಕುಸಿದು ಬಿದ್ದಿದ್ದು ಸದ್ಯ ತಾತ್ಕಾಲಿಕ ಸಂಪರ್ಕವೂ ಇಲ್ಲದಂತಾಗಿದೆ. ಇಲ್ಲಿ ಮೋರಿ ನಿರ್ಮಾಣಕ್ಕೆ ಖಾಸಗಿಯವರ ಆಕ್ಷೇಪ ಇರುವ ಕಾರಣ ಸಂಪರ್ಕಕ್ಕೆ ಮುಂದಿನ ಯೋಜನೆ ಏನು ಎಂಬುದು ಕಾದು ನೋಡಬೇಕಾಗಿದೆ.

ಸ್ಥಳಕ್ಕೆ ಪಂಚಾಯಿತಿ ಆಡಳಿತ ಮಂಡಳಿ ತೆರಳಿ ಪರಿಶೀಲನೆ ನಡೆಸಿದ್ದು ತಾತ್ಕಾಲಿಕ ಸಂಪರ್ಕ ಕಲ್ಪಿಸಿ ಕೊಡುವ ಭರವಸೆ ನೀಡಿದೆ.

Related posts

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
error: Content is protected !!