September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ಪ್ರತಿ ವರ್ಷದಂತೆ ಈ ವರ್ಷವೂ ಹೊರ ತಂದ ‘ಬೆಳಕಿನ ಉದಯ’ ವಿಶೇಷ ಸಾಹಿತ್ಯ ಪುಟಗಳನ್ನು ಒಳಗೊಂಡ ವರ್ಣರಂಜಿತ ವಿಶೇಷ ಸಂಚಿಕೆ-೨೦೨೫ನ್ನು ಅ.೧೫ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅವರು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಗೊಂಡ ಸುದ್ದಿಉದಯ ವಾರಪತ್ರಿಕೆ ಅಲ್ಪಕಾಲದಲ್ಲಿ ಜನಮನಗಳಿಸಿ ತಾಲೂಕಿನ ಹೆಮ್ಮೆಯ ಪತ್ರಿಕೆಯಾಗಿ ಮೂಡಿ ಬರುತ್ತಿದೆ. ಪತ್ರಿಕೆ ಉತ್ತಮವಾಗಿ ವಿಶಿಷ್ಟ ಗುಣಮಟ್ಟದ ಪ್ರಕಟಗೊಳ್ಳುತ್ತಿದ್ದು, ತಾಲೂಕಿನ ಮೂಲೆ, ಮೂಲೆಗೂ, ತಲುಪಿ ಮನೆ ಮಾತಾಗಿರುವುದು ಅಭಿನಂದನೀಯ ಪ್ರತೀ ವರ್ಷವೂ ದೀಪಾವಳಿ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಹೊರ ತಂದಿರುವುದು ಸಂತೋಷವಾಗಿದೆ. ಸಂಚಿಕೆಯಲ್ಲಿ ಉತ್ತಮ ವಿಚಾರಗಳಿದ್ದು, ತಾಲೂಕಿನ ಓದುಗರಿಗೆ , ಬರಹ ಗಾರರಿಗೆಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿರುವುದು ಒಳ್ಳೆಯ ವಿಚಾರ ಎಂದು ಹೇಳಿ, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪತ್ರಿಕೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ತುಕಾರಾಮ್ ಬಿ., ಸಂಪಾದಕರಾದ ಬಿ.ಎಸ್.ಕುಲಾಲ್, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್, ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ , ವರದಿಗಾರ ಮನೀಶ್ ವಿ.ಅಂಚನ್, ರವೀಂದ್ರ ಶೆಟ್ಟಿ ಬಳಂಜಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
error: Content is protected !!