24 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ಪ್ರತಿ ವರ್ಷದಂತೆ ಈ ವರ್ಷವೂ ಹೊರ ತಂದ ‘ಬೆಳಕಿನ ಉದಯ’ ವಿಶೇಷ ಸಾಹಿತ್ಯ ಪುಟಗಳನ್ನು ಒಳಗೊಂಡ ವರ್ಣರಂಜಿತ ವಿಶೇಷ ಸಂಚಿಕೆ-೨೦೨೫ನ್ನು ಅ.೧೫ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅವರು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಗೊಂಡ ಸುದ್ದಿಉದಯ ವಾರಪತ್ರಿಕೆ ಅಲ್ಪಕಾಲದಲ್ಲಿ ಜನಮನಗಳಿಸಿ ತಾಲೂಕಿನ ಹೆಮ್ಮೆಯ ಪತ್ರಿಕೆಯಾಗಿ ಮೂಡಿ ಬರುತ್ತಿದೆ. ಪತ್ರಿಕೆ ಉತ್ತಮವಾಗಿ ವಿಶಿಷ್ಟ ಗುಣಮಟ್ಟದ ಪ್ರಕಟಗೊಳ್ಳುತ್ತಿದ್ದು, ತಾಲೂಕಿನ ಮೂಲೆ, ಮೂಲೆಗೂ, ತಲುಪಿ ಮನೆ ಮಾತಾಗಿರುವುದು ಅಭಿನಂದನೀಯ ಪ್ರತೀ ವರ್ಷವೂ ದೀಪಾವಳಿ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಹೊರ ತಂದಿರುವುದು ಸಂತೋಷವಾಗಿದೆ. ಸಂಚಿಕೆಯಲ್ಲಿ ಉತ್ತಮ ವಿಚಾರಗಳಿದ್ದು, ತಾಲೂಕಿನ ಓದುಗರಿಗೆ , ಬರಹ ಗಾರರಿಗೆಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿರುವುದು ಒಳ್ಳೆಯ ವಿಚಾರ ಎಂದು ಹೇಳಿ, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪತ್ರಿಕೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ತುಕಾರಾಮ್ ಬಿ., ಸಂಪಾದಕರಾದ ಬಿ.ಎಸ್.ಕುಲಾಲ್, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್, ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ , ವರದಿಗಾರ ಮನೀಶ್ ವಿ.ಅಂಚನ್, ರವೀಂದ್ರ ಶೆಟ್ಟಿ ಬಳಂಜಉಪಸ್ಥಿತರಿದ್ದರು.

Related posts

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!