25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ಪ್ರತಿ ವರ್ಷದಂತೆ ಈ ವರ್ಷವೂ ಹೊರ ತಂದ ‘ಬೆಳಕಿನ ಉದಯ’ ವಿಶೇಷ ಸಾಹಿತ್ಯ ಪುಟಗಳನ್ನು ಒಳಗೊಂಡ ವರ್ಣರಂಜಿತ ವಿಶೇಷ ಸಂಚಿಕೆ-೨೦೨೫ನ್ನು ಅ.೧೫ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅವರು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಗೊಂಡ ಸುದ್ದಿಉದಯ ವಾರಪತ್ರಿಕೆ ಅಲ್ಪಕಾಲದಲ್ಲಿ ಜನಮನಗಳಿಸಿ ತಾಲೂಕಿನ ಹೆಮ್ಮೆಯ ಪತ್ರಿಕೆಯಾಗಿ ಮೂಡಿ ಬರುತ್ತಿದೆ. ಪತ್ರಿಕೆ ಉತ್ತಮವಾಗಿ ವಿಶಿಷ್ಟ ಗುಣಮಟ್ಟದ ಪ್ರಕಟಗೊಳ್ಳುತ್ತಿದ್ದು, ತಾಲೂಕಿನ ಮೂಲೆ, ಮೂಲೆಗೂ, ತಲುಪಿ ಮನೆ ಮಾತಾಗಿರುವುದು ಅಭಿನಂದನೀಯ ಪ್ರತೀ ವರ್ಷವೂ ದೀಪಾವಳಿ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಹೊರ ತಂದಿರುವುದು ಸಂತೋಷವಾಗಿದೆ. ಸಂಚಿಕೆಯಲ್ಲಿ ಉತ್ತಮ ವಿಚಾರಗಳಿದ್ದು, ತಾಲೂಕಿನ ಓದುಗರಿಗೆ , ಬರಹ ಗಾರರಿಗೆಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿರುವುದು ಒಳ್ಳೆಯ ವಿಚಾರ ಎಂದು ಹೇಳಿ, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಪತ್ರಿಕೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ತುಕಾರಾಮ್ ಬಿ., ಸಂಪಾದಕರಾದ ಬಿ.ಎಸ್.ಕುಲಾಲ್, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್, ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ , ವರದಿಗಾರ ಮನೀಶ್ ವಿ.ಅಂಚನ್, ರವೀಂದ್ರ ಶೆಟ್ಟಿ ಬಳಂಜಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya
error: Content is protected !!