25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ ಡಾ.ರವಿ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಭಾರತವನ್ನು ರೇಬೀಸ್ ರೋಗ ಮುಕ್ತವಾಗಿ ಮಾಡುವ ಉದ್ದೇಶದಿಂದ ಸರಕಾರವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದುದರಿಂದ ಸಾಕು ನಾಯಿಗಳು, ಬೀದಿ ನಾಯಿ ಮತ್ತು ಬೆಕ್ಕುಗಳ ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್, ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಪಶು ಸಂಗೋಪನೆ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮತ್ತು ಶಾಲಾ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಿದೆ ಎಂದು ಬೆಳ್ತಂಗಡಿ ಪಶು ಸಂಗೋಪನೆ ಪಶುವೈದ್ಯ ಡಾ. ರವಿ ಕುಮಾರ್ ಹೇಳಿದರು.

ನಿವೃತ್ತ ಸೈನಿಕ ಸುಭ್ರಮಣಿ ಹಾಗೂ ಆಶೋಕ ಆಚಾರ್ಯ ಅವರ ನಾಯಿಗಳಿಗೆ ಸಾಂಕೇತಿಕವಾಗಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರ ಸಾಕು ನಾಯಿ,ಬೆಕ್ಕುಗಳಿಗೆ ಲಸಿಕೆ ಹಾಕಿಸಲು ಕಳಿಯದಲ್ಲಿ 7 ಮತ್ತು ನ್ಯಾಯತರ್ಪು ಗ್ರಾಮದಲ್ಲಿ 10 ಪ್ರಮುಖ ಕೇಂದ್ರಗಳನ್ನು ಗುರುತಿಸಿ, 2 ವೈದ್ಯರ ತಂಡಗಳನ್ನು ಮಾಡಿದರು.

ಸುಮಾರು 130 ಹೆಚ್ಚು ನಾಯಿ,ಬೆಕ್ಕುಗಳಿಗೆ ಲಸಿಕೆ ನೀಡಿದರು.ಪಶುಪಾಲನೆ ಇಲಾಖೆಯ ಸಿಬ್ಬಂದಿಗಳಾದ ಡಾ.ರಮೇಶ್‌. ಸಹಾಯಕ ಚಂದ್ರ ಕುಮಾರ್, ದೀರಾಜ್ ಪಶು ಸಖಿ ರೂಪಾ,ಪಂಚಾಯತ್ ಸಿಬ್ಬಂದಿಗಳಾದ ರವು ಹೆಚ್.,ಸುರೇಶ್ ಗೌಡ ಹೆಚ್,ಸಿಬ್ಬಂದಿಗಳು ಮತ್ತಿತರರಿದ್ದರು.ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ.ಕುಂಞ ಕೆ. ನಿರೂಪಿಸಿ,ವಂದಿಸಿದರು.

Related posts

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!