July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ ಡಾ.ರವಿ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಭಾರತವನ್ನು ರೇಬೀಸ್ ರೋಗ ಮುಕ್ತವಾಗಿ ಮಾಡುವ ಉದ್ದೇಶದಿಂದ ಸರಕಾರವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದುದರಿಂದ ಸಾಕು ನಾಯಿಗಳು, ಬೀದಿ ನಾಯಿ ಮತ್ತು ಬೆಕ್ಕುಗಳ ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್, ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಪಶು ಸಂಗೋಪನೆ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮತ್ತು ಶಾಲಾ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಿದೆ ಎಂದು ಬೆಳ್ತಂಗಡಿ ಪಶು ಸಂಗೋಪನೆ ಪಶುವೈದ್ಯ ಡಾ. ರವಿ ಕುಮಾರ್ ಹೇಳಿದರು.

ನಿವೃತ್ತ ಸೈನಿಕ ಸುಭ್ರಮಣಿ ಹಾಗೂ ಆಶೋಕ ಆಚಾರ್ಯ ಅವರ ನಾಯಿಗಳಿಗೆ ಸಾಂಕೇತಿಕವಾಗಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರ ಸಾಕು ನಾಯಿ,ಬೆಕ್ಕುಗಳಿಗೆ ಲಸಿಕೆ ಹಾಕಿಸಲು ಕಳಿಯದಲ್ಲಿ 7 ಮತ್ತು ನ್ಯಾಯತರ್ಪು ಗ್ರಾಮದಲ್ಲಿ 10 ಪ್ರಮುಖ ಕೇಂದ್ರಗಳನ್ನು ಗುರುತಿಸಿ, 2 ವೈದ್ಯರ ತಂಡಗಳನ್ನು ಮಾಡಿದರು.

ಸುಮಾರು 130 ಹೆಚ್ಚು ನಾಯಿ,ಬೆಕ್ಕುಗಳಿಗೆ ಲಸಿಕೆ ನೀಡಿದರು.ಪಶುಪಾಲನೆ ಇಲಾಖೆಯ ಸಿಬ್ಬಂದಿಗಳಾದ ಡಾ.ರಮೇಶ್‌. ಸಹಾಯಕ ಚಂದ್ರ ಕುಮಾರ್, ದೀರಾಜ್ ಪಶು ಸಖಿ ರೂಪಾ,ಪಂಚಾಯತ್ ಸಿಬ್ಬಂದಿಗಳಾದ ರವು ಹೆಚ್.,ಸುರೇಶ್ ಗೌಡ ಹೆಚ್,ಸಿಬ್ಬಂದಿಗಳು ಮತ್ತಿತರರಿದ್ದರು.ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ.ಕುಂಞ ಕೆ. ನಿರೂಪಿಸಿ,ವಂದಿಸಿದರು.

Related posts

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!