26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಕೈಯ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ವಿಶ್ವದಾದ್ಯಂತ ಅನೇಕ ಮಕ್ಕಳು ಕೈಯ ಅಸುರಕ್ಷತೆಯಿಂದಾಗಿ ನ್ಯೂಮೇನಿಯಾ ಡಯೇರಿಯಾದಿಂದ ಸಾವನ್ನಪ್ಪುತ್ತಿದ್ದಾರೆ. ಕೊರೋನ ಇತ್ಯಾದಿಗಳು ಕಾಯಿಲೆಗಳು ಕೆಲವು ವೈರಸ್ ಹಾಗೂ ಬ್ಯಾಕ್ಟೀರಿಯಗಳಿಂದ ಬರುವುದರಿಂದ ಕೈಯ ಸುರಕ್ಷತೆ ಅತಿ ಮುಖ್ಯವಾಗಿದೆ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದ ವೈಜ್ಞಾನಿಕ ಕ್ರಮದಿಂದ ಕೈಯನ್ನು ತೊಳೆದುಕೊಳ್ಳಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು .

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಸಂಘ , ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶ , ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಾಂಸ್ಕೃತಿಕ ಸಮಿತಿಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಅಂಗವಾಗಿ ವೈಜ್ಞಾನಿಕವಾಗಿ ಕೈ ತೊಳೆಯುವ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು

ಆಹಾರ ತಿನ್ನುವ ಮೊದಲು ಹಾಗೂ ಆನಂತರ , ಪ್ರಾಣಿಗಳನ್ನು ಮುಟ್ಟಿದಾಗ , ಶೌಚ ಹಾಗೂ ಮೂತ್ರಾದಿಗಳ ವಿಸರ್ಜನೆಯ ಬಳಿಕ ಅಗತ್ಯವಾಗಿ ಸೋಪು ಉಪಯೋಗಿಸಿ ಕೈ ತೊಳೆದುಕೊಳ್ಳಬೇಕೆಂದು ಈ ಸಂದರ್ಭದಲ್ಲಿ ನುಡಿದರು.

ಅಭ್ಯಾಗತರಾಗಿ ಆಗಮಿಸಿದ ಸಾಂಸ್ಕೃತಿಕ ಸಮಿತಿಯ ಸಂಯೋಜಕ ಹಾಗೂ ಹಿಂದಿ ಭಾಷಾ ವಿಭಾಗದ ಮುಖ್ಯಸ್ಥ ನಾಗರಾಜ್ ಭಂಡಾರಿ ಅವರು ಮಾತನಾಡಿ ಕೊರೋನದ ಅನಂತರ ಎಲ್ಲರಿಗೂ ಕೈ ಸುರಕ್ಷತೆ ಬಗ್ಗೆ ಹೆಚ್ಚು ಅರಿವಿಗೆ ಬಂದಿತು. ಅನೇಕ ವರ್ಷಗಳಿಂದ ಇಂತಹ ಅರಿವಿನ ಕಾರ್ಯಕ್ರಮ ನಮ್ಮ ಕಾಲೇಜಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.

ಸಂಸ್ಕೃತ ಸಂಘದ ಅಧ್ಯಕ್ಷೆ ಹಂಸಿನೀ ಭಿಡೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ಸ್ವಾಗತಿಸಿ , ಎಸ್ ಎಸ್ ಎಸ್ ಸ್ವಯಂ ಸೇವಕಿ ಪ್ರಣಮ್ಯಾ ಜಿ.ಕೆ ವಂದಿಸಿದರು.

Related posts

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
error: Content is protected !!