23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

ಉಜಿರೆ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿಯೂ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರಯತ್ನಿಸಿದಲ್ಲಿ  ಉನ್ನತ ಸಾಧನೆ ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಹೇಳಿದರು.


ಅವರು ಗುರುವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕರು ಹಾಗೂ ಬಾಲಕಿಯರ ನೆಟ್‌ಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದುವುದಲ್ಲದೆ ಕ್ರೀಡಾಪಟುಗಳಿಗೆ ಮುಂದೆ ಉತ್ತಮ ಉದ್ಯೋಗವೂ ದೊರಕುತ್ತದೆ ಎಂದು ಹೇಳಿ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ ಉಜಿರೆ ಗ್ರಾಮ ಪಂಚಾಯಿತಿ  ಅಧ್ಯಕ್ಷರಾದ ಉಷಾ ಕಾರಂತ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಿ ಪ್ರೋತ್ಸಾಹಿಸಲಾಗುತ್ತದೆ ಎಂದರು.
ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಸುಜಯ,  ರಾಷ್ಟçಮಟ್ಟದ ಕ್ರೀಡಾಪಟು ಪ್ರೇಮನಾಥ ಶೆಟ್ಟಿ, ಎಡಪದವು, ಮಿಜಾರು ಶುಭಾಶಂಸನೆ ಮಾಡಿದರು.
ಎಸ್.ಡಿ.ಎಂ. ಸೆಕೆಂಡರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ. ಸುರೇಶ, ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ, ಅಖಿಲ್‌ಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ. ಕೃಷ್ಣಾನಂದ ಉಪಸ್ಥಿತರಿದ್ದರು.
ಎಸ್.ಡಿ.ಎಂ. ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಕಿರಣ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ ಧನ್ಯವಾದವಿತ್ತರು.
ಗೇರುಕಟ್ಟೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya
error: Content is protected !!