25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ ಡಾ.ರವಿ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಭಾರತವನ್ನು ರೇಬೀಸ್ ರೋಗ ಮುಕ್ತವಾಗಿ ಮಾಡುವ ಉದ್ದೇಶದಿಂದ ಸರಕಾರವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದುದರಿಂದ ಸಾಕು ನಾಯಿಗಳು, ಬೀದಿ ನಾಯಿ ಮತ್ತು ಬೆಕ್ಕುಗಳ ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್, ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಪಶು ಸಂಗೋಪನೆ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮತ್ತು ಶಾಲಾ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಿದೆ ಎಂದು ಬೆಳ್ತಂಗಡಿ ಪಶು ಸಂಗೋಪನೆ ಪಶುವೈದ್ಯ ಡಾ. ರವಿ ಕುಮಾರ್ ಹೇಳಿದರು.

ನಿವೃತ್ತ ಸೈನಿಕ ಸುಭ್ರಮಣಿ ಹಾಗೂ ಆಶೋಕ ಆಚಾರ್ಯ ಅವರ ನಾಯಿಗಳಿಗೆ ಸಾಂಕೇತಿಕವಾಗಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರ ಸಾಕು ನಾಯಿ,ಬೆಕ್ಕುಗಳಿಗೆ ಲಸಿಕೆ ಹಾಕಿಸಲು ಕಳಿಯದಲ್ಲಿ 7 ಮತ್ತು ನ್ಯಾಯತರ್ಪು ಗ್ರಾಮದಲ್ಲಿ 10 ಪ್ರಮುಖ ಕೇಂದ್ರಗಳನ್ನು ಗುರುತಿಸಿ, 2 ವೈದ್ಯರ ತಂಡಗಳನ್ನು ಮಾಡಿದರು.

ಸುಮಾರು 130 ಹೆಚ್ಚು ನಾಯಿ,ಬೆಕ್ಕುಗಳಿಗೆ ಲಸಿಕೆ ನೀಡಿದರು.ಪಶುಪಾಲನೆ ಇಲಾಖೆಯ ಸಿಬ್ಬಂದಿಗಳಾದ ಡಾ.ರಮೇಶ್‌. ಸಹಾಯಕ ಚಂದ್ರ ಕುಮಾರ್, ದೀರಾಜ್ ಪಶು ಸಖಿ ರೂಪಾ,ಪಂಚಾಯತ್ ಸಿಬ್ಬಂದಿಗಳಾದ ರವು ಹೆಚ್.,ಸುರೇಶ್ ಗೌಡ ಹೆಚ್,ಸಿಬ್ಬಂದಿಗಳು ಮತ್ತಿತರರಿದ್ದರು.ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ.ಕುಂಞ ಕೆ. ನಿರೂಪಿಸಿ,ವಂದಿಸಿದರು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya
error: Content is protected !!