25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ ಡಾ.ರವಿ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಭಾರತವನ್ನು ರೇಬೀಸ್ ರೋಗ ಮುಕ್ತವಾಗಿ ಮಾಡುವ ಉದ್ದೇಶದಿಂದ ಸರಕಾರವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದುದರಿಂದ ಸಾಕು ನಾಯಿಗಳು, ಬೀದಿ ನಾಯಿ ಮತ್ತು ಬೆಕ್ಕುಗಳ ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್, ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಪಶು ಸಂಗೋಪನೆ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮತ್ತು ಶಾಲಾ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಿದೆ ಎಂದು ಬೆಳ್ತಂಗಡಿ ಪಶು ಸಂಗೋಪನೆ ಪಶುವೈದ್ಯ ಡಾ. ರವಿ ಕುಮಾರ್ ಹೇಳಿದರು.

ನಿವೃತ್ತ ಸೈನಿಕ ಸುಭ್ರಮಣಿ ಹಾಗೂ ಆಶೋಕ ಆಚಾರ್ಯ ಅವರ ನಾಯಿಗಳಿಗೆ ಸಾಂಕೇತಿಕವಾಗಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರ ಸಾಕು ನಾಯಿ,ಬೆಕ್ಕುಗಳಿಗೆ ಲಸಿಕೆ ಹಾಕಿಸಲು ಕಳಿಯದಲ್ಲಿ 7 ಮತ್ತು ನ್ಯಾಯತರ್ಪು ಗ್ರಾಮದಲ್ಲಿ 10 ಪ್ರಮುಖ ಕೇಂದ್ರಗಳನ್ನು ಗುರುತಿಸಿ, 2 ವೈದ್ಯರ ತಂಡಗಳನ್ನು ಮಾಡಿದರು.

ಸುಮಾರು 130 ಹೆಚ್ಚು ನಾಯಿ,ಬೆಕ್ಕುಗಳಿಗೆ ಲಸಿಕೆ ನೀಡಿದರು.ಪಶುಪಾಲನೆ ಇಲಾಖೆಯ ಸಿಬ್ಬಂದಿಗಳಾದ ಡಾ.ರಮೇಶ್‌. ಸಹಾಯಕ ಚಂದ್ರ ಕುಮಾರ್, ದೀರಾಜ್ ಪಶು ಸಖಿ ರೂಪಾ,ಪಂಚಾಯತ್ ಸಿಬ್ಬಂದಿಗಳಾದ ರವು ಹೆಚ್.,ಸುರೇಶ್ ಗೌಡ ಹೆಚ್,ಸಿಬ್ಬಂದಿಗಳು ಮತ್ತಿತರರಿದ್ದರು.ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ.ಕುಂಞ ಕೆ. ನಿರೂಪಿಸಿ,ವಂದಿಸಿದರು.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!