September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ ಡಾ.ರವಿ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಭಾರತವನ್ನು ರೇಬೀಸ್ ರೋಗ ಮುಕ್ತವಾಗಿ ಮಾಡುವ ಉದ್ದೇಶದಿಂದ ಸರಕಾರವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದುದರಿಂದ ಸಾಕು ನಾಯಿಗಳು, ಬೀದಿ ನಾಯಿ ಮತ್ತು ಬೆಕ್ಕುಗಳ ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್, ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಪಶು ಸಂಗೋಪನೆ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮತ್ತು ಶಾಲಾ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಿದೆ ಎಂದು ಬೆಳ್ತಂಗಡಿ ಪಶು ಸಂಗೋಪನೆ ಪಶುವೈದ್ಯ ಡಾ. ರವಿ ಕುಮಾರ್ ಹೇಳಿದರು.

ನಿವೃತ್ತ ಸೈನಿಕ ಸುಭ್ರಮಣಿ ಹಾಗೂ ಆಶೋಕ ಆಚಾರ್ಯ ಅವರ ನಾಯಿಗಳಿಗೆ ಸಾಂಕೇತಿಕವಾಗಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರ ಸಾಕು ನಾಯಿ,ಬೆಕ್ಕುಗಳಿಗೆ ಲಸಿಕೆ ಹಾಕಿಸಲು ಕಳಿಯದಲ್ಲಿ 7 ಮತ್ತು ನ್ಯಾಯತರ್ಪು ಗ್ರಾಮದಲ್ಲಿ 10 ಪ್ರಮುಖ ಕೇಂದ್ರಗಳನ್ನು ಗುರುತಿಸಿ, 2 ವೈದ್ಯರ ತಂಡಗಳನ್ನು ಮಾಡಿದರು.

ಸುಮಾರು 130 ಹೆಚ್ಚು ನಾಯಿ,ಬೆಕ್ಕುಗಳಿಗೆ ಲಸಿಕೆ ನೀಡಿದರು.ಪಶುಪಾಲನೆ ಇಲಾಖೆಯ ಸಿಬ್ಬಂದಿಗಳಾದ ಡಾ.ರಮೇಶ್‌. ಸಹಾಯಕ ಚಂದ್ರ ಕುಮಾರ್, ದೀರಾಜ್ ಪಶು ಸಖಿ ರೂಪಾ,ಪಂಚಾಯತ್ ಸಿಬ್ಬಂದಿಗಳಾದ ರವು ಹೆಚ್.,ಸುರೇಶ್ ಗೌಡ ಹೆಚ್,ಸಿಬ್ಬಂದಿಗಳು ಮತ್ತಿತರರಿದ್ದರು.ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ.ಕುಂಞ ಕೆ. ನಿರೂಪಿಸಿ,ವಂದಿಸಿದರು.

Related posts

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!