July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಲು ಸಹಾಯಕ ಆಯುಕ್ತರ‌ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀತಿ ತಂಡದ ಜಯಂತ್ ಟಿ ಕರ್ನಾಟಕ ಲೋಕಾಯುಕ್ತಕ್ಕೆ, ರಾಜ್ಯ ಮಾನವ ಹಕ್ಕುಗಳ‌ ಆಯೋಗಕ್ಕೆ, ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.

ಮಹೇಶ್ ಶೆಟ್ಟಿ ಅವರ ಗಡಿಪಾರು ಪ್ರಕರಣದ‌ ವಿಚಾರಣೆ‌ ವೇಳೆ ಬಂಟ್ವಾಳ ಡಿ ವೈ.ಎಸ್.ಪಿ ಅವರು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯಕ್ಕೆ‌ ಸಲ್ಲಿಸಿರುವ ವರದಿಗಳನ್ನು ಉಲ್ಲೇಘಿಸಿ ದೂರು ನೀಡಲಾಗಿದೆ‌. ಮಹೇಶ್ ಶೆಟ್ಟಿ ಅವರನ್ನು ಗಡಿಪಾರು ಮಾಡುವಂತೆ ಮಾಡುವ ನಿಟ್ಟಿನಲ್ಲಿ ಪ್ರಭಾವ ಬೀರಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಮಹೇಶ್ ಶೆಟ್ಟಿ ಅವರ ವಿರುದ್ದ 26 ಪ್ರಕರಣಗಳಿದ್ದು ಅದರಲ್ಲಿ 16, ಪ್ರಕರಣಗಳು ಈಗಾಗಲೆ ಖುಲಾಸೆಗೊಂಡಿದೆ‌ ಎಂದು ಮಾಹಿತಿ ನೀಡಿರುವ ಜಯಂತ್ ಬಂಟ್ವಾಳ ಡಿವೈ.ಎಸ್.ಪಿ‌ ಅವರು ಯಾವುದೇ ಸಮರ್ಪಕವಾದ ದಾಖಲೆಗಳನ್ನು ನೀಡದೆ ನ್ಯಾಯಾಲಯದಲ್ಲಿ ಖುಲಾಸೆಯಾದ ಪ್ರಕರಣಗಳ ಬಗ್ಗೆ ಲಿಖಿತವಾದ ಹೇಳಿಕೆಗಳನ್ನು ನೀಡಿದ್ದು ಇದು ನ್ಯಾಯಾಂಗಕ್ಕೆ ಮಾಡಿರುವ ನಿಂದನೆಯಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದಲ್ಲದೆ ಇನ್ನೂ ಹಲವು ಆರೋಪಗಳನ್ನು ಮಾಡಿದ್ದಾರೆ.


ಗಡಿಪಾರು ಪ್ರಕರಣದ ವಿಚಾರಣೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಇದರ ನಡುವೆಯೇ ಜಯಂತ್ ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ ವಿರುದ್ದ ಹಲವು ಆರೋಪಗಳನ್ನು ಮಾಡಿ ವಿಡಿಯೋ ಒಂದನ್ನು ಹಾಕಿದ್ದು ಈಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಸುಮೊಟೋ ಪ್ರಕರಣ‌ ದಾಖಲಿಸಲಾಗಿದೆ. ಒಟ್ಟಾರೆಯಾಗಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ನೀಡುವ ತೀರ್ಪು ಇದೆಲ್ಲ ವಿವಾದಗಳಲ್ಲಿಯೂ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.

Related posts

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
error: Content is protected !!