23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಹಾಗೂ ಕೊರಂಜ ಶಾಲೆಯನ್ನು ಕೆ.ಪಿ.ಎಸ್ ಪಬ್ಲಿಕ್ ಸ್ಕೂಲ್ ಯಾಗಿ ಮೇಲ್ದೆರ್ಜೆಗೇರಿಸಿ ಆದೇಶಿಸಲಾಗಿದೆ.

ಈ ಹಿಂದೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದರೊಂದಿಗೆ ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿದ್ದರು.

ಜು.23ರಂದು ಈ ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದ್ದರು.

Related posts

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya
error: Content is protected !!