September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಹಾಗೂ ಕೊರಂಜ ಶಾಲೆಯನ್ನು ಕೆ.ಪಿ.ಎಸ್ ಪಬ್ಲಿಕ್ ಸ್ಕೂಲ್ ಯಾಗಿ ಮೇಲ್ದೆರ್ಜೆಗೇರಿಸಿ ಆದೇಶಿಸಲಾಗಿದೆ.

ಈ ಹಿಂದೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದರೊಂದಿಗೆ ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿದ್ದರು.

ಜು.23ರಂದು ಈ ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದ್ದರು.

Related posts

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya
error: Content is protected !!