September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

ಧರ್ಮಸ್ಥಳ: ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಗ್ರಾಮ ದೈವಗಳ ಉತ್ಸವ ಸಮಿತಿ ಎರ್ಮುಂಜಬೈಲು ನಾರ್ಯ ಧರ್ಮಸ್ಥಳ ಗ್ರಾಮ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಶ್ರೀ ಷಣ್ಮುಖ ಭಜನಾ ಮಂಡಳಿ ಹಾಗೂ ಊರವರ ಸಹಕಾರದೊಂದಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್ ದ ಕಂಡಡ್ ಪರ್ಬದ ಗೊಬ್ಬು-2025 ಅ.19ರಂದು ಪೊದುಂಬಿಲ ದೇವಸ್ಥಾನದ ಬಳಿ ನಡೆಯಲಿದೆ.

ಬೆಳಗ್ಗೆ 8.30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಾಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆಸರ್ ಕಂಡಡ್ ಪರ್ಬದ ಗೊಬ್ಬು ಆಚರಣಾ ಸಮಿತಿ ಅಧ್ಯಕ್ಷ ಕುಮಾರ್ ನೂಜಿಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಿವಿಧ ಗಣ್ಯರು ಆಗಮಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಜರುಗಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಂಚಾಲಕ ಸುಧಾಕರ ಗೌಡ ಧರ್ಮಸ್ಥಳ, ಅಧ್ಯಕ್ಷ ಕುಮಾರ್ ನೂಜಿಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ ನಾರ್ಯ, ಉಪಾಧ್ಯಕ್ಷ ಮೋಹನ್ ಗೌಡ ಅರಿಕೋಡಿ, ಕ್ರೀಡಾ ಸಮಿತಿ ಸಂಚಾಲಕ ಜಯಂತ್ ಗೌಡ ಅರಿಕೋಡಿ, ಆಹಾರ ಸಮಿತಿ ಸಂಚಾಲಕ ಸೂರ್ಯಾನಂದ ರಾವ್ ಪೊದುಂಬಿಲ, ಪದಾಧಿಕಾರಿಗಳು, ಸದಸ್ಯರು ಶ್ರಮಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ 1ರಿಂದ 5 ತರಗತಿಯ ಬಾಲಕ-ಬಾಲಕಿಯರಿಗೆ, 6ರಿಂದ 10ನೇ ತರಗತಿಯ ಬಾಲಕ- ಬಾಲಕಿಯರಿಗೆ, ಮಹಿಳೆಯರಿಗೆ, ಪುರುಷರಿಗೆ, ದಂಪತಿಗಳಿಗೆ, ಹಿರಿಯ ವಿಭಾಗದವರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಹಿಪ್ ಬಾಯ್ಸ್ ನೃತ್ಯ ತಂಡ ಉಜಿರೆ ಇವರಿಂದ ನೃತ್ಯ ಕಾರ್ಯಕ್ರಮ ಜರುಗಲಿದೆ.

Related posts

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya
error: Content is protected !!