July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

ಧರ್ಮಸ್ಥಳ: ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಗ್ರಾಮ ದೈವಗಳ ಉತ್ಸವ ಸಮಿತಿ ಎರ್ಮುಂಜಬೈಲು ನಾರ್ಯ ಧರ್ಮಸ್ಥಳ ಗ್ರಾಮ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಶ್ರೀ ಷಣ್ಮುಖ ಭಜನಾ ಮಂಡಳಿ ಹಾಗೂ ಊರವರ ಸಹಕಾರದೊಂದಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್ ದ ಕಂಡಡ್ ಪರ್ಬದ ಗೊಬ್ಬು-2025 ಅ.19ರಂದು ಪೊದುಂಬಿಲ ದೇವಸ್ಥಾನದ ಬಳಿ ನಡೆಯಲಿದೆ.

ಬೆಳಗ್ಗೆ 8.30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪ್ರಸಾದ್ ಪಾಂಗಣ್ಣಾಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆಸರ್ ಕಂಡಡ್ ಪರ್ಬದ ಗೊಬ್ಬು ಆಚರಣಾ ಸಮಿತಿ ಅಧ್ಯಕ್ಷ ಕುಮಾರ್ ನೂಜಿಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಿವಿಧ ಗಣ್ಯರು ಆಗಮಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಜರುಗಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಂಚಾಲಕ ಸುಧಾಕರ ಗೌಡ ಧರ್ಮಸ್ಥಳ, ಅಧ್ಯಕ್ಷ ಕುಮಾರ್ ನೂಜಿಮಾರ್, ಕಾರ್ಯದರ್ಶಿ ನಿಶಾನ್ ಬಂಗೇರ ನಾರ್ಯ, ಉಪಾಧ್ಯಕ್ಷ ಮೋಹನ್ ಗೌಡ ಅರಿಕೋಡಿ, ಕ್ರೀಡಾ ಸಮಿತಿ ಸಂಚಾಲಕ ಜಯಂತ್ ಗೌಡ ಅರಿಕೋಡಿ, ಆಹಾರ ಸಮಿತಿ ಸಂಚಾಲಕ ಸೂರ್ಯಾನಂದ ರಾವ್ ಪೊದುಂಬಿಲ, ಪದಾಧಿಕಾರಿಗಳು, ಸದಸ್ಯರು ಶ್ರಮಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ 1ರಿಂದ 5 ತರಗತಿಯ ಬಾಲಕ-ಬಾಲಕಿಯರಿಗೆ, 6ರಿಂದ 10ನೇ ತರಗತಿಯ ಬಾಲಕ- ಬಾಲಕಿಯರಿಗೆ, ಮಹಿಳೆಯರಿಗೆ, ಪುರುಷರಿಗೆ, ದಂಪತಿಗಳಿಗೆ, ಹಿರಿಯ ವಿಭಾಗದವರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಹಿಪ್ ಬಾಯ್ಸ್ ನೃತ್ಯ ತಂಡ ಉಜಿರೆ ಇವರಿಂದ ನೃತ್ಯ ಕಾರ್ಯಕ್ರಮ ಜರುಗಲಿದೆ.

Related posts

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!