July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಅ.16 ಪಂಚಾಯತ್ ವಠಾರದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಲಸಿಕೆಯನ್ನು ಪಶು ವೈದ್ಯರಾದ ಡಾ.ರವಿ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಭಾರತವನ್ನು ರೇಬೀಸ್ ರೋಗ ಮುಕ್ತವಾಗಿ ಮಾಡುವ ಉದ್ದೇಶದಿಂದ ಸರಕಾರವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದುದರಿಂದ ಸಾಕು ನಾಯಿಗಳು, ಬೀದಿ ನಾಯಿ ಮತ್ತು ಬೆಕ್ಕುಗಳ ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್, ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ಪಶು ಸಂಗೋಪನೆ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮತ್ತು ಶಾಲಾ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಿದೆ ಎಂದು ಬೆಳ್ತಂಗಡಿ ಪಶು ಸಂಗೋಪನೆ ಪಶುವೈದ್ಯ ಡಾ. ರವಿ ಕುಮಾರ್ ಹೇಳಿದರು.

ನಿವೃತ್ತ ಸೈನಿಕ ಸುಭ್ರಮಣಿ ಹಾಗೂ ಆಶೋಕ ಆಚಾರ್ಯ ಅವರ ನಾಯಿಗಳಿಗೆ ಸಾಂಕೇತಿಕವಾಗಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರ ಸಾಕು ನಾಯಿ,ಬೆಕ್ಕುಗಳಿಗೆ ಲಸಿಕೆ ಹಾಕಿಸಲು ಕಳಿಯದಲ್ಲಿ 7 ಮತ್ತು ನ್ಯಾಯತರ್ಪು ಗ್ರಾಮದಲ್ಲಿ 10 ಪ್ರಮುಖ ಕೇಂದ್ರಗಳನ್ನು ಗುರುತಿಸಿ, 2 ವೈದ್ಯರ ತಂಡಗಳನ್ನು ಮಾಡಿದರು.

ಸುಮಾರು 130 ಹೆಚ್ಚು ನಾಯಿ,ಬೆಕ್ಕುಗಳಿಗೆ ಲಸಿಕೆ ನೀಡಿದರು.ಪಶುಪಾಲನೆ ಇಲಾಖೆಯ ಸಿಬ್ಬಂದಿಗಳಾದ ಡಾ.ರಮೇಶ್‌. ಸಹಾಯಕ ಚಂದ್ರ ಕುಮಾರ್, ದೀರಾಜ್ ಪಶು ಸಖಿ ರೂಪಾ,ಪಂಚಾಯತ್ ಸಿಬ್ಬಂದಿಗಳಾದ ರವು ಹೆಚ್.,ಸುರೇಶ್ ಗೌಡ ಹೆಚ್,ಸಿಬ್ಬಂದಿಗಳು ಮತ್ತಿತರರಿದ್ದರು.ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಪಿ.ಡಿ.ಓ.ಕುಂಞ ಕೆ. ನಿರೂಪಿಸಿ,ವಂದಿಸಿದರು.

Related posts

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya
error: Content is protected !!