ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಲು ಸಹಾಯಕ ಆಯುಕ್ತರ‌ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀತಿ ತಂಡದ ಜಯಂತ್ ಟಿ ಕರ್ನಾಟಕ ಲೋಕಾಯುಕ್ತಕ್ಕೆ, ರಾಜ್ಯ ಮಾನವ ಹಕ್ಕುಗಳ‌ ಆಯೋಗಕ್ಕೆ, ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.

ಮಹೇಶ್ ಶೆಟ್ಟಿ ಅವರ ಗಡಿಪಾರು ಪ್ರಕರಣದ‌ ವಿಚಾರಣೆ‌ ವೇಳೆ ಬಂಟ್ವಾಳ ಡಿ ವೈ.ಎಸ್.ಪಿ ಅವರು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯಕ್ಕೆ‌ ಸಲ್ಲಿಸಿರುವ ವರದಿಗಳನ್ನು ಉಲ್ಲೇಘಿಸಿ ದೂರು ನೀಡಲಾಗಿದೆ‌. ಮಹೇಶ್ ಶೆಟ್ಟಿ ಅವರನ್ನು ಗಡಿಪಾರು ಮಾಡುವಂತೆ ಮಾಡುವ ನಿಟ್ಟಿನಲ್ಲಿ ಪ್ರಭಾವ ಬೀರಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಮಹೇಶ್ ಶೆಟ್ಟಿ ಅವರ ವಿರುದ್ದ 26 ಪ್ರಕರಣಗಳಿದ್ದು ಅದರಲ್ಲಿ 16, ಪ್ರಕರಣಗಳು ಈಗಾಗಲೆ ಖುಲಾಸೆಗೊಂಡಿದೆ‌ ಎಂದು ಮಾಹಿತಿ ನೀಡಿರುವ ಜಯಂತ್ ಬಂಟ್ವಾಳ ಡಿವೈ.ಎಸ್.ಪಿ‌ ಅವರು ಯಾವುದೇ ಸಮರ್ಪಕವಾದ ದಾಖಲೆಗಳನ್ನು ನೀಡದೆ ನ್ಯಾಯಾಲಯದಲ್ಲಿ ಖುಲಾಸೆಯಾದ ಪ್ರಕರಣಗಳ ಬಗ್ಗೆ ಲಿಖಿತವಾದ ಹೇಳಿಕೆಗಳನ್ನು ನೀಡಿದ್ದು ಇದು ನ್ಯಾಯಾಂಗಕ್ಕೆ ಮಾಡಿರುವ ನಿಂದನೆಯಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದಲ್ಲದೆ ಇನ್ನೂ ಹಲವು ಆರೋಪಗಳನ್ನು ಮಾಡಿದ್ದಾರೆ.


ಗಡಿಪಾರು ಪ್ರಕರಣದ ವಿಚಾರಣೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಇದರ ನಡುವೆಯೇ ಜಯಂತ್ ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ ವಿರುದ್ದ ಹಲವು ಆರೋಪಗಳನ್ನು ಮಾಡಿ ವಿಡಿಯೋ ಒಂದನ್ನು ಹಾಕಿದ್ದು ಈಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಸುಮೊಟೋ ಪ್ರಕರಣ‌ ದಾಖಲಿಸಲಾಗಿದೆ. ಒಟ್ಟಾರೆಯಾಗಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ನೀಡುವ ತೀರ್ಪು ಇದೆಲ್ಲ ವಿವಾದಗಳಲ್ಲಿಯೂ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya
error: Content is protected !!