27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು ಇಂದಿನಿಂದ ಸರ್ಕಾರಿ ಬಸ್ ಸಂಚಾರ ಪ್ರಾರಂಭವಾಗಿದೆ.


ನೂತನವಾಗಿ ಪ್ರಾರಂಭಗೊಂಡ ಬಸ್ಸಿಗೆ ಕೊಯ್ಯರಿನಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅದ್ದೂರಿ ಸ್ವಾಗತವನ್ನು ಕೋರಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಸದಸ್ಯರಾದ ಶರೀಫ್ ಶಬರಬೈಲ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಕೊಯ್ಯರು, ಕೊಯೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ, ಸದಸ್ಯರಾದ. ಲೋಕೇಶ್ ಗೌಡ, ಲತೀಫ್ ಉನಾಲು, ಶ್ರೀಮತಿ ಚಂದ್ರಾವತಿ, ಶ್ರೀಮತಿ ಹೇಮಾವತಿ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯಾರು, ಶಾಲಾ ಉಪನ್ಯಾಸಕರಾದ ಮೋಹನ್ ಗೌಡ, ರಾಮಚಂದ್ರ ದೊಡ್ಮನಿ, ಪ್ರಮುಖರಾದ ನವೀನ್ ಕುಮಾರ್ ಮೊಹಮದ್ ಸಿದ್ದಿಕ್, ಪರಮೇಶ್ವರ್ ಗೌಡ, ಸಲೀಂ ಪಾತ್ರಾಲಾ, ಕೃಷ್ಣಕುಮಾರ್, ಡಿಕಯ್ಯ, ಯೂಸುಫ್, ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya
error: Content is protected !!