July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

ತಣ್ಣೀರುಪಂತ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ತಿಂಗಳ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರುಪಂತ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿ ರಾಜ್ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವ ಉದ್ಯೋಗ ಮಾಡಲು ಮಹಿಳೆಯರಲ್ಲಿ ಛಲ ಇಚ್ಛಾ ಶಕ್ತಿ ಇದ್ದಲ್ಲಿ ಯಾವ ಕೆಲಸ ಕೂಡ ಸುಲಭ ಸಾಧ್ಯ, ಇನ್ನೂ ಹೆಚ್ಚಿನ ಕೌಶಲ್ಯ ಪಡೆದು ಸ್ವ ಉದ್ಯೋಗಕ್ಕೆ ಎಲ್ಲರೂ ಪ್ರಯತ್ನ ಪಡೆಯಿರಿ ಎಂದು ಕರೆ ನೀಡಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ಟೈಲರಿಂಗ್ ಗೆ ಇರುವ ಅವಕಾಶ ಗಳ ಬಗ್ಗೆ ತಿಳಿಸಿ ತರಬೇತಿ ನಂತರ ಎಲ್ಲಾ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿ, ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಕ್ಕೆ ಸಿಗುವ ಸೌಲಭ್ಯ ಗಳ ವಿವರಿಸಿದರು. ತರಬೇತಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ತಣ್ಣೀರುಪಂತ ಪಂಚಾಯತ್ ಹಾಲು ಉತ್ಪಾದಕರ ಸೊಸೈಟಿ ಕಾರ್ಯದರ್ಶಿ ಜಯರಾಜ್, ಬ್ರೈಡಲ್ ಮೇಕ್ಅಪ್ ತರಬೇತುದಾರರಾದ ಸಂಧ್ಯಾ ಸಾತ್ವಿಕ್, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು. ಸ್ನೇಹಾ ಭಟ್ ಕಾರ್ಯಕ್ರಮ ನಿರೂಪಿಸಿ, ಸುಖಿತಾ ಶೆಟ್ಟಿ ಸ್ವಾಗತಿಸಿ, ವೇದಾವತಿ ಶೆಟ್ಟಿ ಧನ್ಯವಾದ ಗೈದರು. 3 ತಿಂಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.

Related posts

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
error: Content is protected !!