24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ (ಬಿ.ಎಡ್.) ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಶ್ರೀ ಅವರು ಮಾತನಾಡಿ, ಶ್ರಮ, ನಿಷ್ಠೆ, ಶಿಸ್ತು ಜೀವನದ ಯಶಸ್ಸಿಗೆ ಕಾರಣವಾಗುತ್ತದೆ. ಆತ್ಮವಿಶ್ವಾಸ, ಛಲ ಇದ್ದಾಗ ಯಾವುದೇ ಸಾಧನೆ ಮಾಡಬಹುದು ಎಂದರು.

ವಿದ್ಯಾರ್ಥಿ ಸಂಘಟನೆಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಉನ್ನತ ಹುದ್ದೆಯನ್ನು ಹಾಗೂ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಆತ್ಮಸ್ಥೈರ್ಯ ಬರುತ್ತದೆ ಎಂದು ಅವರು ಹೇಳಿದರು.
ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ, ಶುಭಕೋರಿದರು.

ಇದೇ ಸಂದರ್ಭದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ವಿಜ್, ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು.

ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಗೂಡುದೀಪ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು.

ವಿದ್ಯಾರ್ಥಿ ಸಂಘದ ನಾಯಕಿ ಅಪೇಕ್ಷಾ ಹಾಗೂ ಇತರ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya
error: Content is protected !!