25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

ಉಜಿರೆ: ಮಕ್ಕಳಿಗೆ ಹೆತ್ತವರಿಂದ ಅವರ ಜವಾಬ್ದಾರಿಗಳ ಅರಿವು ಮೂಡಿಸುವುದು ಇಂದಿನ ದಿನಮಾನಗಳಲ್ಲಿ ಬಹಳ ಅಗತ್ಯವಾಗಿದೆ . ವಿದ್ಯಾರ್ಥಿಗಾಗಿ ಮಾಡುವ ಖರ್ಚು-ವೆಚ್ಚಗಳ ಕುರಿತಾಗಿ ಅವರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ತನ್ನ ಸಾಧನೆಯಲ್ಲಿ ಮೇಲುಗೈ ಸಾಧಿಸಿದರೆ ಮಾತ್ರವೇ ಅವನು ಆಸೆ ಪಟ್ಟ ವಸ್ತುಗಳು ಕೈಸೇರುವಂತಾಗಬೇಕು. ಹಾಗೂ ಬೇರೆಯವರ ಬಗ್ಗೆ ವಿಮರ್ಶೆ ಮಾಡುವ ಬದಲು ನಮ್ಮ ಒಳಗನ್ನು ನೋಡುವ ಗುಣ ಬೆಳೆಸಬೇಕು. ಕಲಿಕೆಯಲ್ಲಿ ಅಂಕದ ಜೊತೆಗೆ ಜೀವನ ಶಿಕ್ಷಣ ರೂಢಿಗತವಾಗಬೇಕೆಂದು ಇದಕ್ಕೆ ಎಲ್ಲ ಪೋಷಕರ ಹಾಗೂ ಶಿಕ್ಷಕರ ಸಹಕಾರ ಹಾಗೂ ಮಾರ್ಗದರ್ಶನ ಬಹಳ ಅತ್ಯಗತ್ಯ ಎಂದು ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯಾರ್ಥಿ ನಿಲಯಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿರುವ ಪೂರಣ್ ವರ್ಮಾರವರು ಪೋಷಕರ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ರವರು ವಿದ್ಯಾರ್ಥಿ ಹೆತ್ತವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಅಗತ್ಯ ಮಾಹಿತಿಗಳನ್ನು ನೀಡಿದರು.

ಎಸ್.ಡಿ. ಎಂ.ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಯುವರಾಜ ಪೂವಣಿಯವರು ಮಾತನಾಡಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಯ ಜವಾಬ್ದಾರಿಗಳ ಕುರಿತು ಅಗತ್ಯ ಮಾಹಿತಿಗಳನ್ನು ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ವಿಕ್ರಂ. ಪಿ ಯವರು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಸ್ಕೃತ ವಿಭಾಗ ಮುಖ್ಯಸ್ಥರಾಗಿರುವ ಮಹೇಶ್ ಎಸ್. ಎಸ್. ಕಾರ್ಯಕ್ರಮ ನಿರ್ವಹಿಸಿದರು.

Related posts

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya
error: Content is protected !!