23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

ಉಜಿರೆ: ಮಕ್ಕಳಿಗೆ ಹೆತ್ತವರಿಂದ ಅವರ ಜವಾಬ್ದಾರಿಗಳ ಅರಿವು ಮೂಡಿಸುವುದು ಇಂದಿನ ದಿನಮಾನಗಳಲ್ಲಿ ಬಹಳ ಅಗತ್ಯವಾಗಿದೆ . ವಿದ್ಯಾರ್ಥಿಗಾಗಿ ಮಾಡುವ ಖರ್ಚು-ವೆಚ್ಚಗಳ ಕುರಿತಾಗಿ ಅವರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ತನ್ನ ಸಾಧನೆಯಲ್ಲಿ ಮೇಲುಗೈ ಸಾಧಿಸಿದರೆ ಮಾತ್ರವೇ ಅವನು ಆಸೆ ಪಟ್ಟ ವಸ್ತುಗಳು ಕೈಸೇರುವಂತಾಗಬೇಕು. ಹಾಗೂ ಬೇರೆಯವರ ಬಗ್ಗೆ ವಿಮರ್ಶೆ ಮಾಡುವ ಬದಲು ನಮ್ಮ ಒಳಗನ್ನು ನೋಡುವ ಗುಣ ಬೆಳೆಸಬೇಕು. ಕಲಿಕೆಯಲ್ಲಿ ಅಂಕದ ಜೊತೆಗೆ ಜೀವನ ಶಿಕ್ಷಣ ರೂಢಿಗತವಾಗಬೇಕೆಂದು ಇದಕ್ಕೆ ಎಲ್ಲ ಪೋಷಕರ ಹಾಗೂ ಶಿಕ್ಷಕರ ಸಹಕಾರ ಹಾಗೂ ಮಾರ್ಗದರ್ಶನ ಬಹಳ ಅತ್ಯಗತ್ಯ ಎಂದು ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯಾರ್ಥಿ ನಿಲಯಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿರುವ ಪೂರಣ್ ವರ್ಮಾರವರು ಪೋಷಕರ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ರವರು ವಿದ್ಯಾರ್ಥಿ ಹೆತ್ತವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಅಗತ್ಯ ಮಾಹಿತಿಗಳನ್ನು ನೀಡಿದರು.

ಎಸ್.ಡಿ. ಎಂ.ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಯುವರಾಜ ಪೂವಣಿಯವರು ಮಾತನಾಡಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಯ ಜವಾಬ್ದಾರಿಗಳ ಕುರಿತು ಅಗತ್ಯ ಮಾಹಿತಿಗಳನ್ನು ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ವಿಕ್ರಂ. ಪಿ ಯವರು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಸ್ಕೃತ ವಿಭಾಗ ಮುಖ್ಯಸ್ಥರಾಗಿರುವ ಮಹೇಶ್ ಎಸ್. ಎಸ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!