25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ದೀಪಾವಳಿಯ ಶುಭ ಸಂದರ್ಭದ ನಿಮಿತ್ತ ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು.

ರೋವರ್ಸ್ ಮತ್ತು ರೇಂಜರ್ಸ್ ನ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಸರ್ವ ಧರ್ಮ ಪಾರ್ಥನೆಯನ್ನು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ ಪ್ರಾರ್ಥನೆ ಎನ್ನುವುದು ಸರ್ವರನ್ನೂ ಒಂದು ಗೂಡಿಸುವ ಒಂದು ಸರಳ ಮಾಧ್ಯಮವಾಗಿದೆ. ಸರ್ವ ಧರ್ಮ ಪ್ರಾರ್ಥನೆ ಎಲ್ಲಾ ಧರ್ಮದವರನ್ನೂ ಸಮನಾಗಿ ಗೌವರವಿಸುವ ಒಂದು ಅದ್ಭುತ ಕಾರ್ಯ. ಅತೀಯಾದ ಪೂಜೆ ಪುನಸ್ಕಾರಗಳಿಗಿಂತ ಮನಃ ಪೂರ್ವಕವಾಗಿ ಮಾಡುವ ಪ್ರಾರ್ಥನೆಯು ಎಷ್ಟೋ ಹೆಚ್ಚು ಪರಿಣಾಮಕಾರಿ ಮತ್ತು ನಮ್ಮ ಮನಸ್ಸನ್ನು ಶುದ್ಧಿಕರಿಸುತ್ತದೆ ಹಾಗೂ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಪ್ರೆರೇಪಿಸುತ್ತದೆ ಎಂದು ನುಡಿದರು. ಆ ನಿಟ್ಟಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ನಡೆಸಿದ ಸರ್ವ ಧರ್ಮ ಪ್ರಾರ್ಥನೆ ಶ್ಲಾಘನೀಯ ಎಂದರು.

ಸರ್ವಧರ್ಮ ಪ್ರಾರ್ಥನೆಯಲ್ಲಿ ಕಾಲೇಜಿನ ಭೌತ ಶಾಸ್ತ್ರ ವಿಭಾಗ ಮುಖ್ಯಸ್ಥ ತಿರುಮಲ ಪ್ರಸಾದ್ ಸಿ ಹೆಚ್, ಭೌತ ಶಾಸ್ತ್ರ ಉಪನ್ಯಾಸಕಿ ಸವಿತಾ ಬಿ, ಗ್ರಂಥ ಪಾಲಕ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದ ನಾಯಕರಾದ ಲಕ್ಷ್ಮೀಶ್ ಭಟ್ ಮತ್ತು ಅಂಕಿತಾ ಎಂ ಕೆ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!