ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆ ಉಜಿರೆ ಇಲ್ಲಿ ನಾಳೆ ಅ.19 ರಂದು ಹಿರಿಯ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸುವುದಕ್ಕಾಗಿ ಅನುಗ್ರಹ ಸಮಾಗಮ ಕಾರ್ಯಕ್ರಮವನ್ನು ಅನುಗ್ರಹ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ವಂ!ಫಾ!ಅಬೆಲ್ ಲೋಬೊ ಇವರು ವಹಿಸಿಕೊಳ್ಳಲಿರುವರು ಉದ್ಘಾಟಕರಾಗಿ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಉಜಿರೆ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡವೆಟ್ನಾಯ ಇವರು ನೆರವೇರಿಸಲಿರುವರು.

ಮುಖ್ಯ ಅತಿಥಿಗಳಾಗಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆ್ಯಂಟನಿ ಫೆರ್ನಾಂಡಿಸ್ ಹಾಗೂ ಹಿರಿಯ ವಿದ್ಯಾರ್ಥಿಗಳಾದ ಜಯಪ್ರಕಾಶ್, ಡಾ. ಶಾಲ್ಮಲಿ, ಶ್ರೀಮತಿ ಪ್ರಿತೀತ ಬಂಗೇರ, ರಂಜನ್ ಗೌಡ, ಶ್ರೀಮತಿ ಮೋನಿಕಾ, ಅರುಣ್ ಕುಮಾರ್, ಡಾ. ನಿಶಾ ಹನೀಫ್ ಇವರು ಭಾಗವಹಿಸಲಿರುವರು. ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ಪ್ರಾರಂಭಗೊಂಡು ನಂತರ ವಿವಿಧ ಲಕ್ಕಿಗೇಮ್ಸ್ ಗಳು ಹಾಗೂ 11 ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮವು ನಡೆಯಲಿದ್ದು, ನಂತರ ಮನೋರಂಜನ ಕಾರ್ಯಕ್ರಮಗಳು ಇದ್ದು ಶುಚಿ-ರುಚಿಯಾದ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಆದ್ದರಿಂದ ಅನುಗ್ರಹ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ರವರು ಈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya
error: Content is protected !!