23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

ಉಜಿರೆ: ಮಕ್ಕಳಿಗೆ ಹೆತ್ತವರಿಂದ ಅವರ ಜವಾಬ್ದಾರಿಗಳ ಅರಿವು ಮೂಡಿಸುವುದು ಇಂದಿನ ದಿನಮಾನಗಳಲ್ಲಿ ಬಹಳ ಅಗತ್ಯವಾಗಿದೆ . ವಿದ್ಯಾರ್ಥಿಗಾಗಿ ಮಾಡುವ ಖರ್ಚು-ವೆಚ್ಚಗಳ ಕುರಿತಾಗಿ ಅವರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ತನ್ನ ಸಾಧನೆಯಲ್ಲಿ ಮೇಲುಗೈ ಸಾಧಿಸಿದರೆ ಮಾತ್ರವೇ ಅವನು ಆಸೆ ಪಟ್ಟ ವಸ್ತುಗಳು ಕೈಸೇರುವಂತಾಗಬೇಕು. ಹಾಗೂ ಬೇರೆಯವರ ಬಗ್ಗೆ ವಿಮರ್ಶೆ ಮಾಡುವ ಬದಲು ನಮ್ಮ ಒಳಗನ್ನು ನೋಡುವ ಗುಣ ಬೆಳೆಸಬೇಕು. ಕಲಿಕೆಯಲ್ಲಿ ಅಂಕದ ಜೊತೆಗೆ ಜೀವನ ಶಿಕ್ಷಣ ರೂಢಿಗತವಾಗಬೇಕೆಂದು ಇದಕ್ಕೆ ಎಲ್ಲ ಪೋಷಕರ ಹಾಗೂ ಶಿಕ್ಷಕರ ಸಹಕಾರ ಹಾಗೂ ಮಾರ್ಗದರ್ಶನ ಬಹಳ ಅತ್ಯಗತ್ಯ ಎಂದು ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯಾರ್ಥಿ ನಿಲಯಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿರುವ ಪೂರಣ್ ವರ್ಮಾರವರು ಪೋಷಕರ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ರವರು ವಿದ್ಯಾರ್ಥಿ ಹೆತ್ತವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಅಗತ್ಯ ಮಾಹಿತಿಗಳನ್ನು ನೀಡಿದರು.

ಎಸ್.ಡಿ. ಎಂ.ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಯುವರಾಜ ಪೂವಣಿಯವರು ಮಾತನಾಡಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಯ ಜವಾಬ್ದಾರಿಗಳ ಕುರಿತು ಅಗತ್ಯ ಮಾಹಿತಿಗಳನ್ನು ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ವಿಕ್ರಂ. ಪಿ ಯವರು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಸ್ಕೃತ ವಿಭಾಗ ಮುಖ್ಯಸ್ಥರಾಗಿರುವ ಮಹೇಶ್ ಎಸ್. ಎಸ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya
error: Content is protected !!