September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

ಉಜಿರೆ: ಮಕ್ಕಳಿಗೆ ಹೆತ್ತವರಿಂದ ಅವರ ಜವಾಬ್ದಾರಿಗಳ ಅರಿವು ಮೂಡಿಸುವುದು ಇಂದಿನ ದಿನಮಾನಗಳಲ್ಲಿ ಬಹಳ ಅಗತ್ಯವಾಗಿದೆ . ವಿದ್ಯಾರ್ಥಿಗಾಗಿ ಮಾಡುವ ಖರ್ಚು-ವೆಚ್ಚಗಳ ಕುರಿತಾಗಿ ಅವರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ತನ್ನ ಸಾಧನೆಯಲ್ಲಿ ಮೇಲುಗೈ ಸಾಧಿಸಿದರೆ ಮಾತ್ರವೇ ಅವನು ಆಸೆ ಪಟ್ಟ ವಸ್ತುಗಳು ಕೈಸೇರುವಂತಾಗಬೇಕು. ಹಾಗೂ ಬೇರೆಯವರ ಬಗ್ಗೆ ವಿಮರ್ಶೆ ಮಾಡುವ ಬದಲು ನಮ್ಮ ಒಳಗನ್ನು ನೋಡುವ ಗುಣ ಬೆಳೆಸಬೇಕು. ಕಲಿಕೆಯಲ್ಲಿ ಅಂಕದ ಜೊತೆಗೆ ಜೀವನ ಶಿಕ್ಷಣ ರೂಢಿಗತವಾಗಬೇಕೆಂದು ಇದಕ್ಕೆ ಎಲ್ಲ ಪೋಷಕರ ಹಾಗೂ ಶಿಕ್ಷಕರ ಸಹಕಾರ ಹಾಗೂ ಮಾರ್ಗದರ್ಶನ ಬಹಳ ಅತ್ಯಗತ್ಯ ಎಂದು ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯಾರ್ಥಿ ನಿಲಯಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿರುವ ಪೂರಣ್ ವರ್ಮಾರವರು ಪೋಷಕರ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ರವರು ವಿದ್ಯಾರ್ಥಿ ಹೆತ್ತವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಅಗತ್ಯ ಮಾಹಿತಿಗಳನ್ನು ನೀಡಿದರು.

ಎಸ್.ಡಿ. ಎಂ.ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಯುವರಾಜ ಪೂವಣಿಯವರು ಮಾತನಾಡಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಯ ಜವಾಬ್ದಾರಿಗಳ ಕುರಿತು ಅಗತ್ಯ ಮಾಹಿತಿಗಳನ್ನು ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ವಿಕ್ರಂ. ಪಿ ಯವರು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಸ್ಕೃತ ವಿಭಾಗ ಮುಖ್ಯಸ್ಥರಾಗಿರುವ ಮಹೇಶ್ ಎಸ್. ಎಸ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!