ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಮತ್ತು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ, ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳನ್ನು ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ ನೀಡಲಾಯಿತು.

ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಸ್ಟರ್ ಮತ್ತು ಅಲ್ಲಿನ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಲೆಟರ್, ಸ್ಟ್ಯಾಂಪ್ ಗಳ ಬಗ್ಗೆ ಉತ್ತಮ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಲೆಟರ್ ವಿತರಿಸಿದರು. ಹಾಗೆಯೇ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಗಳು ಪೊಲೀಸ್ ಟೋಪಿ, ಆಯುಧಗಳ, ಸಹಾಯವಾಣಿ ನಂಬರ್ ಗಳ ಬಗ್ಗೆ ವಿವರವಾದ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ನೀಡಿರುತ್ತಾರೆ. ಅದೇ ರೀತಿ ವೇಣೂರಿನ ಮಾರ್ಕೆಟಿನಲ್ಲಿ ವಿವಿಧ ರೀತಿಯ ತರಕಾರಿ, ಫಲವಸ್ತು, ತಿಂಡಿಗಳು , ಹೂವಿನ ಗಿಡಗಳನ್ನು ನೋಡಿ ಸಂತೋಷ ಪಟ್ಟರು.ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ, ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ,ಶಿಕ್ಷಕಿ ಶ್ರೀಮತಿ ಸುಪ್ರೀತಾ, ದೈಹಿಕ ಶಿಕ್ಷಕ ಶ್ರಿ ಶೈಲೇಶ್, ಶಾಲಾ ವಾಹನದ ಚಾಲಕ ದಯಾನಂದ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

Related posts

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘ ದವರು ನೀಡಿದ ಸ್ಥಳದಲ್ಲಿ ನೂತನ ಅಂಗನವಾಡಿ ಕಟ್ಟಡ ಶುಭಾರಂಭ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya
error: Content is protected !!