24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್ ಮತ್ತು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ, ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳನ್ನು ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ ನೀಡಲಾಯಿತು.

ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಸ್ಟರ್ ಮತ್ತು ಅಲ್ಲಿನ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಲೆಟರ್, ಸ್ಟ್ಯಾಂಪ್ ಗಳ ಬಗ್ಗೆ ಉತ್ತಮ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಲೆಟರ್ ವಿತರಿಸಿದರು. ಹಾಗೆಯೇ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಗಳು ಪೊಲೀಸ್ ಟೋಪಿ, ಆಯುಧಗಳ, ಸಹಾಯವಾಣಿ ನಂಬರ್ ಗಳ ಬಗ್ಗೆ ವಿವರವಾದ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ನೀಡಿರುತ್ತಾರೆ. ಅದೇ ರೀತಿ ವೇಣೂರಿನ ಮಾರ್ಕೆಟಿನಲ್ಲಿ ವಿವಿಧ ರೀತಿಯ ತರಕಾರಿ, ಫಲವಸ್ತು, ತಿಂಡಿಗಳು , ಹೂವಿನ ಗಿಡಗಳನ್ನು ನೋಡಿ ಸಂತೋಷ ಪಟ್ಟರು.ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ, ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ,ಶಿಕ್ಷಕಿ ಶ್ರೀಮತಿ ಸುಪ್ರೀತಾ, ದೈಹಿಕ ಶಿಕ್ಷಕ ಶ್ರಿ ಶೈಲೇಶ್, ಶಾಲಾ ವಾಹನದ ಚಾಲಕ ದಯಾನಂದ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya
error: Content is protected !!