September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

ಉಜಿರೆ: ಮಕ್ಕಳಿಗೆ ಹೆತ್ತವರಿಂದ ಅವರ ಜವಾಬ್ದಾರಿಗಳ ಅರಿವು ಮೂಡಿಸುವುದು ಇಂದಿನ ದಿನಮಾನಗಳಲ್ಲಿ ಬಹಳ ಅಗತ್ಯವಾಗಿದೆ . ವಿದ್ಯಾರ್ಥಿಗಾಗಿ ಮಾಡುವ ಖರ್ಚು-ವೆಚ್ಚಗಳ ಕುರಿತಾಗಿ ಅವರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ತನ್ನ ಸಾಧನೆಯಲ್ಲಿ ಮೇಲುಗೈ ಸಾಧಿಸಿದರೆ ಮಾತ್ರವೇ ಅವನು ಆಸೆ ಪಟ್ಟ ವಸ್ತುಗಳು ಕೈಸೇರುವಂತಾಗಬೇಕು. ಹಾಗೂ ಬೇರೆಯವರ ಬಗ್ಗೆ ವಿಮರ್ಶೆ ಮಾಡುವ ಬದಲು ನಮ್ಮ ಒಳಗನ್ನು ನೋಡುವ ಗುಣ ಬೆಳೆಸಬೇಕು. ಕಲಿಕೆಯಲ್ಲಿ ಅಂಕದ ಜೊತೆಗೆ ಜೀವನ ಶಿಕ್ಷಣ ರೂಢಿಗತವಾಗಬೇಕೆಂದು ಇದಕ್ಕೆ ಎಲ್ಲ ಪೋಷಕರ ಹಾಗೂ ಶಿಕ್ಷಕರ ಸಹಕಾರ ಹಾಗೂ ಮಾರ್ಗದರ್ಶನ ಬಹಳ ಅತ್ಯಗತ್ಯ ಎಂದು ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯಾರ್ಥಿ ನಿಲಯಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿರುವ ಪೂರಣ್ ವರ್ಮಾರವರು ಪೋಷಕರ ಸಭಾ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ರವರು ವಿದ್ಯಾರ್ಥಿ ಹೆತ್ತವರಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಅಗತ್ಯ ಮಾಹಿತಿಗಳನ್ನು ನೀಡಿದರು.

ಎಸ್.ಡಿ. ಎಂ.ಸಂಸ್ಥೆಗಳ ವಸತಿ ನಿಲಯಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಯುವರಾಜ ಪೂವಣಿಯವರು ಮಾತನಾಡಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಯ ಜವಾಬ್ದಾರಿಗಳ ಕುರಿತು ಅಗತ್ಯ ಮಾಹಿತಿಗಳನ್ನು ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ವಿಕ್ರಂ. ಪಿ ಯವರು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಸ್ಕೃತ ವಿಭಾಗ ಮುಖ್ಯಸ್ಥರಾಗಿರುವ ಮಹೇಶ್ ಎಸ್. ಎಸ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಸೌತಡ್ಕ ಸಮೀಪದ ಕಡೀರ -ಬೈಲಂಗಡಿ – ಮಾಸ್ತಿಕಲ್ಲು ಮಜಲು ನಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya
error: Content is protected !!