32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ದೀಪಾವಳಿಯ ಶುಭ ಸಂದರ್ಭದ ನಿಮಿತ್ತ ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು.

ರೋವರ್ಸ್ ಮತ್ತು ರೇಂಜರ್ಸ್ ನ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಸರ್ವ ಧರ್ಮ ಪಾರ್ಥನೆಯನ್ನು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ ಪ್ರಾರ್ಥನೆ ಎನ್ನುವುದು ಸರ್ವರನ್ನೂ ಒಂದು ಗೂಡಿಸುವ ಒಂದು ಸರಳ ಮಾಧ್ಯಮವಾಗಿದೆ. ಸರ್ವ ಧರ್ಮ ಪ್ರಾರ್ಥನೆ ಎಲ್ಲಾ ಧರ್ಮದವರನ್ನೂ ಸಮನಾಗಿ ಗೌವರವಿಸುವ ಒಂದು ಅದ್ಭುತ ಕಾರ್ಯ. ಅತೀಯಾದ ಪೂಜೆ ಪುನಸ್ಕಾರಗಳಿಗಿಂತ ಮನಃ ಪೂರ್ವಕವಾಗಿ ಮಾಡುವ ಪ್ರಾರ್ಥನೆಯು ಎಷ್ಟೋ ಹೆಚ್ಚು ಪರಿಣಾಮಕಾರಿ ಮತ್ತು ನಮ್ಮ ಮನಸ್ಸನ್ನು ಶುದ್ಧಿಕರಿಸುತ್ತದೆ ಹಾಗೂ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಪ್ರೆರೇಪಿಸುತ್ತದೆ ಎಂದು ನುಡಿದರು. ಆ ನಿಟ್ಟಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ನಡೆಸಿದ ಸರ್ವ ಧರ್ಮ ಪ್ರಾರ್ಥನೆ ಶ್ಲಾಘನೀಯ ಎಂದರು.

ಸರ್ವಧರ್ಮ ಪ್ರಾರ್ಥನೆಯಲ್ಲಿ ಕಾಲೇಜಿನ ಭೌತ ಶಾಸ್ತ್ರ ವಿಭಾಗ ಮುಖ್ಯಸ್ಥ ತಿರುಮಲ ಪ್ರಸಾದ್ ಸಿ ಹೆಚ್, ಭೌತ ಶಾಸ್ತ್ರ ಉಪನ್ಯಾಸಕಿ ಸವಿತಾ ಬಿ, ಗ್ರಂಥ ಪಾಲಕ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದ ನಾಯಕರಾದ ಲಕ್ಷ್ಮೀಶ್ ಭಟ್ ಮತ್ತು ಅಂಕಿತಾ ಎಂ ಕೆ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

Related posts

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!