23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆ ಉಜಿರೆ ಇಲ್ಲಿ ನಾಳೆ ಅ.19 ರಂದು ಹಿರಿಯ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸುವುದಕ್ಕಾಗಿ ಅನುಗ್ರಹ ಸಮಾಗಮ ಕಾರ್ಯಕ್ರಮವನ್ನು ಅನುಗ್ರಹ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ವಂ!ಫಾ!ಅಬೆಲ್ ಲೋಬೊ ಇವರು ವಹಿಸಿಕೊಳ್ಳಲಿರುವರು ಉದ್ಘಾಟಕರಾಗಿ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಉಜಿರೆ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡವೆಟ್ನಾಯ ಇವರು ನೆರವೇರಿಸಲಿರುವರು.

ಮುಖ್ಯ ಅತಿಥಿಗಳಾಗಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆ್ಯಂಟನಿ ಫೆರ್ನಾಂಡಿಸ್ ಹಾಗೂ ಹಿರಿಯ ವಿದ್ಯಾರ್ಥಿಗಳಾದ ಜಯಪ್ರಕಾಶ್, ಡಾ. ಶಾಲ್ಮಲಿ, ಶ್ರೀಮತಿ ಪ್ರಿತೀತ ಬಂಗೇರ, ರಂಜನ್ ಗೌಡ, ಶ್ರೀಮತಿ ಮೋನಿಕಾ, ಅರುಣ್ ಕುಮಾರ್, ಡಾ. ನಿಶಾ ಹನೀಫ್ ಇವರು ಭಾಗವಹಿಸಲಿರುವರು. ಕಾರ್ಯಕ್ರಮವು ಬೆಳಿಗ್ಗೆ 9.30ಕ್ಕೆ ಪ್ರಾರಂಭಗೊಂಡು ನಂತರ ವಿವಿಧ ಲಕ್ಕಿಗೇಮ್ಸ್ ಗಳು ಹಾಗೂ 11 ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮವು ನಡೆಯಲಿದ್ದು, ನಂತರ ಮನೋರಂಜನ ಕಾರ್ಯಕ್ರಮಗಳು ಇದ್ದು ಶುಚಿ-ರುಚಿಯಾದ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಆದ್ದರಿಂದ ಅನುಗ್ರಹ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ರವರು ಈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya
error: Content is protected !!