July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘ ಕಣಿಯೂರು ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವು ಅ.19ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ಯುವ ವೇದಿಕೆಯ ಅಧ್ಯಕ್ಷ ಅವಿನಾಶ್ ಕುಲಾಲ್ ಅವರು ಮಾತನಾಡಿ, ಸಂಘದ ಮೂಲಕ ನಾವು ಬಲಿಷ್ಠರಾಗಬೇಕು ಮತ್ತು ನಮ್ಮಲ್ಲಿ ಒಗ್ಗಟ್ಟು ಇರಬೇಕು. ಯುವಕರು ಸಂಘದ ಮೂಲಕ ಸಕ್ರಿಯವಾಗಿ ತೊಡಗಿಕೊಂಡರೆ, ಸಮಾಜದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆನ್‌ಲೈನ್ ಛದ್ಮವೇಶ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳ ಸೃಜನಾತ್ಮಕತೆ ಮತ್ತು ಕಲೆ ಪ್ರದರ್ಶನಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಯಿತು.ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಂಡು ನಿರಂತರವಾಗಿ ಜನಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಅಶೋಕ್ ಕುಲಾಲ್ ಕಣಿಯೂರು ಇವರಿಗೆ ಸಂಘದ ವತಿಯಿಂದ “ಸೇವಾ ಸ್ಪೂರ್ತಿ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಉಮೇಶ್ ಪಿಲಿಗೂಡು ಮಾತನಾಡಿ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಸಂಘದ ನಿಜವಾದ ಶಕ್ತಿ ಬೆಳಗುತ್ತದೆ ಎಂದು ಹೇಳಿದರು.ಕಾರ್ಯದರ್ಶಿ ಸುಧೀರ್ ಕೆ ಎನ್ ಸ್ವಾಗತಿಸಿ, ದಿನೇಶ್ ಅಂತರ ವಂದಿಸಿದರು. ಶ್ರೀಮತಿ ಮಮಿತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya
error: Content is protected !!