September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘ ಕಣಿಯೂರು ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವು ಅ.19ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ಯುವ ವೇದಿಕೆಯ ಅಧ್ಯಕ್ಷ ಅವಿನಾಶ್ ಕುಲಾಲ್ ಅವರು ಮಾತನಾಡಿ, ಸಂಘದ ಮೂಲಕ ನಾವು ಬಲಿಷ್ಠರಾಗಬೇಕು ಮತ್ತು ನಮ್ಮಲ್ಲಿ ಒಗ್ಗಟ್ಟು ಇರಬೇಕು. ಯುವಕರು ಸಂಘದ ಮೂಲಕ ಸಕ್ರಿಯವಾಗಿ ತೊಡಗಿಕೊಂಡರೆ, ಸಮಾಜದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆನ್‌ಲೈನ್ ಛದ್ಮವೇಶ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳ ಸೃಜನಾತ್ಮಕತೆ ಮತ್ತು ಕಲೆ ಪ್ರದರ್ಶನಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಯಿತು.ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಂಡು ನಿರಂತರವಾಗಿ ಜನಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಅಶೋಕ್ ಕುಲಾಲ್ ಕಣಿಯೂರು ಇವರಿಗೆ ಸಂಘದ ವತಿಯಿಂದ “ಸೇವಾ ಸ್ಪೂರ್ತಿ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಉಮೇಶ್ ಪಿಲಿಗೂಡು ಮಾತನಾಡಿ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಸಂಘದ ನಿಜವಾದ ಶಕ್ತಿ ಬೆಳಗುತ್ತದೆ ಎಂದು ಹೇಳಿದರು.ಕಾರ್ಯದರ್ಶಿ ಸುಧೀರ್ ಕೆ ಎನ್ ಸ್ವಾಗತಿಸಿ, ದಿನೇಶ್ ಅಂತರ ವಂದಿಸಿದರು. ಶ್ರೀಮತಿ ಮಮಿತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು ಮತ್ತು ಕುತ್ಲೂರು ಗ್ರಾಮಗಳ ವಿದ್ಯುತ್ ಸಂಪರ್ಕಕ್ಕಾಗಿ ವನ್ಯಜೀವಿ ಮಂಡಳಿ ಅನುಮೋದನೆ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಅಧ್ಯಕ್ಷ ಶೇಖರ್ ಎಲ್.ಹೇಳಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!