25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘ ಕಣಿಯೂರು ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವು ಅ.19ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ತಾಲೂಕು ಯುವ ವೇದಿಕೆಯ ಅಧ್ಯಕ್ಷ ಅವಿನಾಶ್ ಕುಲಾಲ್ ಅವರು ಮಾತನಾಡಿ, ಸಂಘದ ಮೂಲಕ ನಾವು ಬಲಿಷ್ಠರಾಗಬೇಕು ಮತ್ತು ನಮ್ಮಲ್ಲಿ ಒಗ್ಗಟ್ಟು ಇರಬೇಕು. ಯುವಕರು ಸಂಘದ ಮೂಲಕ ಸಕ್ರಿಯವಾಗಿ ತೊಡಗಿಕೊಂಡರೆ, ಸಮಾಜದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆನ್‌ಲೈನ್ ಛದ್ಮವೇಶ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳ ಸೃಜನಾತ್ಮಕತೆ ಮತ್ತು ಕಲೆ ಪ್ರದರ್ಶನಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಯಿತು.ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಂಡು ನಿರಂತರವಾಗಿ ಜನಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಅಶೋಕ್ ಕುಲಾಲ್ ಕಣಿಯೂರು ಇವರಿಗೆ ಸಂಘದ ವತಿಯಿಂದ “ಸೇವಾ ಸ್ಪೂರ್ತಿ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಉಮೇಶ್ ಪಿಲಿಗೂಡು ಮಾತನಾಡಿ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಸಂಘದ ನಿಜವಾದ ಶಕ್ತಿ ಬೆಳಗುತ್ತದೆ ಎಂದು ಹೇಳಿದರು.ಕಾರ್ಯದರ್ಶಿ ಸುಧೀರ್ ಕೆ ಎನ್ ಸ್ವಾಗತಿಸಿ, ದಿನೇಶ್ ಅಂತರ ವಂದಿಸಿದರು. ಶ್ರೀಮತಿ ಮಮಿತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!