25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

ಬೆಳ್ತಂಗಡಿ; ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ‌ ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ‌ ಖಾಸಗಿ ಜಾಗದಲ್ಲಿ ಅಕ್ರಮ ಕೋಳಿ ಅಂಕ ಹಾಗೂ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಬೆಳ್ತಂಗಡಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಕುಲಜ್ಯೀತಿ ತಿಲಕ್ ಹಾಗೂ ತಂಡ ಅ.17 ರಂದು ದಾಳಿ ನಡೆಸಿದ್ದು ಈ ವೇಳೆ ಅಲ್ಲಿದ್ದವರು ಓಡಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದರು.

ಆದರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಶೇಖರ ಹೆಗ್ಡೆ, ಪುನೀತ್, ಜಗದೀಶ್ ಎಂಬವರಾಗಿದ್ದಾರೆ. ಓಡಿ ತಪ್ಪಿಸಿಕೊಂಡ ಆರೋಪಿಗಳಾದ ಉದಯ್, ಜನಾರ್ಧನ ಗೌಡ ಮಲ್ಲೊಟ್ಟು ಎಂಬವರಾಗಿದ್ದಾರೆ.ಸ್ಥಳದಿಂದ ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದು 500ರೂ ನಗದನ್ನು ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಅ.17 ರಂದು ಕಲಂ 87 KP Act ಜೊತೆಗೆ ಕಲಂ 11(1)(a),11(1)(n) PREVEBTION OF CRUELTY TO ANIMAL ACT 1960 ಯಂತೆ ಪ್ರಕರಣ ದಾಖಲಾಗಿದೆ.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
error: Content is protected !!