23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

ಬೆಳ್ತಂಗಡಿ; ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ‌ ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ‌ ಖಾಸಗಿ ಜಾಗದಲ್ಲಿ ಅಕ್ರಮ ಕೋಳಿ ಅಂಕ ಹಾಗೂ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಬೆಳ್ತಂಗಡಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಕುಲಜ್ಯೀತಿ ತಿಲಕ್ ಹಾಗೂ ತಂಡ ಅ.17 ರಂದು ದಾಳಿ ನಡೆಸಿದ್ದು ಈ ವೇಳೆ ಅಲ್ಲಿದ್ದವರು ಓಡಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದರು.

ಆದರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಶೇಖರ ಹೆಗ್ಡೆ, ಪುನೀತ್, ಜಗದೀಶ್ ಎಂಬವರಾಗಿದ್ದಾರೆ. ಓಡಿ ತಪ್ಪಿಸಿಕೊಂಡ ಆರೋಪಿಗಳಾದ ಉದಯ್, ಜನಾರ್ಧನ ಗೌಡ ಮಲ್ಲೊಟ್ಟು ಎಂಬವರಾಗಿದ್ದಾರೆ.ಸ್ಥಳದಿಂದ ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದು 500ರೂ ನಗದನ್ನು ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಅ.17 ರಂದು ಕಲಂ 87 KP Act ಜೊತೆಗೆ ಕಲಂ 11(1)(a),11(1)(n) PREVEBTION OF CRUELTY TO ANIMAL ACT 1960 ಯಂತೆ ಪ್ರಕರಣ ದಾಖಲಾಗಿದೆ.

Related posts

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya
error: Content is protected !!