September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

ಬೆಳ್ತಂಗಡಿ; ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ‌ ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ‌ ಖಾಸಗಿ ಜಾಗದಲ್ಲಿ ಅಕ್ರಮ ಕೋಳಿ ಅಂಕ ಹಾಗೂ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಬೆಳ್ತಂಗಡಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಕುಲಜ್ಯೀತಿ ತಿಲಕ್ ಹಾಗೂ ತಂಡ ಅ.17 ರಂದು ದಾಳಿ ನಡೆಸಿದ್ದು ಈ ವೇಳೆ ಅಲ್ಲಿದ್ದವರು ಓಡಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದರು.

ಆದರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಶೇಖರ ಹೆಗ್ಡೆ, ಪುನೀತ್, ಜಗದೀಶ್ ಎಂಬವರಾಗಿದ್ದಾರೆ. ಓಡಿ ತಪ್ಪಿಸಿಕೊಂಡ ಆರೋಪಿಗಳಾದ ಉದಯ್, ಜನಾರ್ಧನ ಗೌಡ ಮಲ್ಲೊಟ್ಟು ಎಂಬವರಾಗಿದ್ದಾರೆ.ಸ್ಥಳದಿಂದ ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದು 500ರೂ ನಗದನ್ನು ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಅ.17 ರಂದು ಕಲಂ 87 KP Act ಜೊತೆಗೆ ಕಲಂ 11(1)(a),11(1)(n) PREVEBTION OF CRUELTY TO ANIMAL ACT 1960 ಯಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!