23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗ ಹರಿಯುವ ನೇತ್ರಾವತಿ ನದಿಯ ಪರಿಸರದಲ್ಲಿ ಭಾನುವಾರ ಮೊಸಳೆ ಕಂಡು ಬಂದಿದೆ.

ದೇವಸ್ಥಾನದ ಸಮೀಪ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ಸಂಗಮಗೊಳ್ಳುತ್ತದೆ. ನದಿಯಲ್ಲಿ ಬೆಳಗಿನ 10ಗಂಟೆ ಸಮಯ ಮೊಸಳೆ ಈಜಾಡುತ್ತಿರುವುದು ದೇವಸ್ಥಾನದಲ್ಲಿ ಇದ್ದವರಿಗೆ ಕಂಡು ಬಂದಿದೆ. ಬಳಿಕ ಮೊಸಳೆ ನದಿಯ ಇನ್ನೊಂದು ಭಾಗದಲ್ಲಿ ಮರಳಿನ ಮೇಲೆ ವಿಶ್ರಮಿಸುತ್ತಿತ್ತು. ಬಳಿಕ ಮತ್ತೆ ನದಿಗೆ ಇಳಿದ ಮೊಸಳೆ ಸ್ವಲ್ಪ ಸಮಯದ ನಂತರ ಅದೇ ಸ್ಥಳದಲ್ಲಿ ಕಂಡುಬಂತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸುಮಾರು ಒಂದು ತಾಸಿನಷ್ಟು ಸಮಯ ಅಲ್ಲೇ ಇದ್ದ ಮೊಸಳೆ ಮತ್ತೆ ನದಿಗೆ ಇಳಿದಿದೆ.ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆ ಕಂಡುಬಂದ ಸ್ಥಳಕ್ಕೆ ಹೋಗಲು ಹೆಚ್ಚಿನ ನೀರ ಹರಿವು ಹಾಗೂ ಸ್ಥಳದಲ್ಲಿ ಹೂಳು ತುಂಬಿರುವುದು ಅಡ್ಡಿಯಾಗಿದ್ದು ಮೊಸಳೆ ಇಲ್ಲಿಂದ ಯಾವ ಪ್ರದೇಶಕ್ಕೆ ಹೋಗಿದೆ ಎಂಬುದು ತಿಳಿದು ಬಂದಿಲ್ಲ.ಕಳೆದ ಮೂರು-ನಾಲ್ಕು ದಿನಗಳಿಂದ ನೇತ್ರಾವತಿ, ಮೃತ್ಯುಂಜಯ ನದಿ ಪ್ರದೇಶದ ಅಲ್ಲಲ್ಲಿ ಮೊಸಳೆ ಕಂಡು ಬಂದಿರುವ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.ಮುಂಡಾಜೆ ಕಲ್ಮಂಜ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರಿಕೆ ವಹಿಸಬೇಕಾಗಿದೆ.

Related posts

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya
error: Content is protected !!