22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗ ಹರಿಯುವ ನೇತ್ರಾವತಿ ನದಿಯ ಪರಿಸರದಲ್ಲಿ ಭಾನುವಾರ ಮೊಸಳೆ ಕಂಡು ಬಂದಿದೆ.

ದೇವಸ್ಥಾನದ ಸಮೀಪ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ಸಂಗಮಗೊಳ್ಳುತ್ತದೆ. ನದಿಯಲ್ಲಿ ಬೆಳಗಿನ 10ಗಂಟೆ ಸಮಯ ಮೊಸಳೆ ಈಜಾಡುತ್ತಿರುವುದು ದೇವಸ್ಥಾನದಲ್ಲಿ ಇದ್ದವರಿಗೆ ಕಂಡು ಬಂದಿದೆ. ಬಳಿಕ ಮೊಸಳೆ ನದಿಯ ಇನ್ನೊಂದು ಭಾಗದಲ್ಲಿ ಮರಳಿನ ಮೇಲೆ ವಿಶ್ರಮಿಸುತ್ತಿತ್ತು. ಬಳಿಕ ಮತ್ತೆ ನದಿಗೆ ಇಳಿದ ಮೊಸಳೆ ಸ್ವಲ್ಪ ಸಮಯದ ನಂತರ ಅದೇ ಸ್ಥಳದಲ್ಲಿ ಕಂಡುಬಂತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸುಮಾರು ಒಂದು ತಾಸಿನಷ್ಟು ಸಮಯ ಅಲ್ಲೇ ಇದ್ದ ಮೊಸಳೆ ಮತ್ತೆ ನದಿಗೆ ಇಳಿದಿದೆ.ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆ ಕಂಡುಬಂದ ಸ್ಥಳಕ್ಕೆ ಹೋಗಲು ಹೆಚ್ಚಿನ ನೀರ ಹರಿವು ಹಾಗೂ ಸ್ಥಳದಲ್ಲಿ ಹೂಳು ತುಂಬಿರುವುದು ಅಡ್ಡಿಯಾಗಿದ್ದು ಮೊಸಳೆ ಇಲ್ಲಿಂದ ಯಾವ ಪ್ರದೇಶಕ್ಕೆ ಹೋಗಿದೆ ಎಂಬುದು ತಿಳಿದು ಬಂದಿಲ್ಲ.ಕಳೆದ ಮೂರು-ನಾಲ್ಕು ದಿನಗಳಿಂದ ನೇತ್ರಾವತಿ, ಮೃತ್ಯುಂಜಯ ನದಿ ಪ್ರದೇಶದ ಅಲ್ಲಲ್ಲಿ ಮೊಸಳೆ ಕಂಡು ಬಂದಿರುವ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.ಮುಂಡಾಜೆ ಕಲ್ಮಂಜ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರಿಕೆ ವಹಿಸಬೇಕಾಗಿದೆ.

Related posts

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya
error: Content is protected !!