22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

ಬೆಳ್ತಂಗಡಿ; ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ‌ ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ‌ ಖಾಸಗಿ ಜಾಗದಲ್ಲಿ ಅಕ್ರಮ ಕೋಳಿ ಅಂಕ ಹಾಗೂ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಬೆಳ್ತಂಗಡಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಕುಲಜ್ಯೀತಿ ತಿಲಕ್ ಹಾಗೂ ತಂಡ ಅ.17 ರಂದು ದಾಳಿ ನಡೆಸಿದ್ದು ಈ ವೇಳೆ ಅಲ್ಲಿದ್ದವರು ಓಡಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದರು.

ಆದರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಶೇಖರ ಹೆಗ್ಡೆ, ಪುನೀತ್, ಜಗದೀಶ್ ಎಂಬವರಾಗಿದ್ದಾರೆ. ಓಡಿ ತಪ್ಪಿಸಿಕೊಂಡ ಆರೋಪಿಗಳಾದ ಉದಯ್, ಜನಾರ್ಧನ ಗೌಡ ಮಲ್ಲೊಟ್ಟು ಎಂಬವರಾಗಿದ್ದಾರೆ.ಸ್ಥಳದಿಂದ ಐದು ಕೋಳಿಗಳನ್ನು ವಶಪಡಿಸಿಕೊಂಡಿದ್ದು 500ರೂ ನಗದನ್ನು ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಅ.17 ರಂದು ಕಲಂ 87 KP Act ಜೊತೆಗೆ ಕಲಂ 11(1)(a),11(1)(n) PREVEBTION OF CRUELTY TO ANIMAL ACT 1960 ಯಂತೆ ಪ್ರಕರಣ ದಾಖಲಾಗಿದೆ.

Related posts

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya
error: Content is protected !!