September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗ ಹರಿಯುವ ನೇತ್ರಾವತಿ ನದಿಯ ಪರಿಸರದಲ್ಲಿ ಭಾನುವಾರ ಮೊಸಳೆ ಕಂಡು ಬಂದಿದೆ.

ದೇವಸ್ಥಾನದ ಸಮೀಪ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ಸಂಗಮಗೊಳ್ಳುತ್ತದೆ. ನದಿಯಲ್ಲಿ ಬೆಳಗಿನ 10ಗಂಟೆ ಸಮಯ ಮೊಸಳೆ ಈಜಾಡುತ್ತಿರುವುದು ದೇವಸ್ಥಾನದಲ್ಲಿ ಇದ್ದವರಿಗೆ ಕಂಡು ಬಂದಿದೆ. ಬಳಿಕ ಮೊಸಳೆ ನದಿಯ ಇನ್ನೊಂದು ಭಾಗದಲ್ಲಿ ಮರಳಿನ ಮೇಲೆ ವಿಶ್ರಮಿಸುತ್ತಿತ್ತು. ಬಳಿಕ ಮತ್ತೆ ನದಿಗೆ ಇಳಿದ ಮೊಸಳೆ ಸ್ವಲ್ಪ ಸಮಯದ ನಂತರ ಅದೇ ಸ್ಥಳದಲ್ಲಿ ಕಂಡುಬಂತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸುಮಾರು ಒಂದು ತಾಸಿನಷ್ಟು ಸಮಯ ಅಲ್ಲೇ ಇದ್ದ ಮೊಸಳೆ ಮತ್ತೆ ನದಿಗೆ ಇಳಿದಿದೆ.ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆ ಕಂಡುಬಂದ ಸ್ಥಳಕ್ಕೆ ಹೋಗಲು ಹೆಚ್ಚಿನ ನೀರ ಹರಿವು ಹಾಗೂ ಸ್ಥಳದಲ್ಲಿ ಹೂಳು ತುಂಬಿರುವುದು ಅಡ್ಡಿಯಾಗಿದ್ದು ಮೊಸಳೆ ಇಲ್ಲಿಂದ ಯಾವ ಪ್ರದೇಶಕ್ಕೆ ಹೋಗಿದೆ ಎಂಬುದು ತಿಳಿದು ಬಂದಿಲ್ಲ.ಕಳೆದ ಮೂರು-ನಾಲ್ಕು ದಿನಗಳಿಂದ ನೇತ್ರಾವತಿ, ಮೃತ್ಯುಂಜಯ ನದಿ ಪ್ರದೇಶದ ಅಲ್ಲಲ್ಲಿ ಮೊಸಳೆ ಕಂಡು ಬಂದಿರುವ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.ಮುಂಡಾಜೆ ಕಲ್ಮಂಜ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರಿಕೆ ವಹಿಸಬೇಕಾಗಿದೆ.

Related posts

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!