July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗ ಹರಿಯುವ ನೇತ್ರಾವತಿ ನದಿಯ ಪರಿಸರದಲ್ಲಿ ಭಾನುವಾರ ಮೊಸಳೆ ಕಂಡು ಬಂದಿದೆ.

ದೇವಸ್ಥಾನದ ಸಮೀಪ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ಸಂಗಮಗೊಳ್ಳುತ್ತದೆ. ನದಿಯಲ್ಲಿ ಬೆಳಗಿನ 10ಗಂಟೆ ಸಮಯ ಮೊಸಳೆ ಈಜಾಡುತ್ತಿರುವುದು ದೇವಸ್ಥಾನದಲ್ಲಿ ಇದ್ದವರಿಗೆ ಕಂಡು ಬಂದಿದೆ. ಬಳಿಕ ಮೊಸಳೆ ನದಿಯ ಇನ್ನೊಂದು ಭಾಗದಲ್ಲಿ ಮರಳಿನ ಮೇಲೆ ವಿಶ್ರಮಿಸುತ್ತಿತ್ತು. ಬಳಿಕ ಮತ್ತೆ ನದಿಗೆ ಇಳಿದ ಮೊಸಳೆ ಸ್ವಲ್ಪ ಸಮಯದ ನಂತರ ಅದೇ ಸ್ಥಳದಲ್ಲಿ ಕಂಡುಬಂತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸುಮಾರು ಒಂದು ತಾಸಿನಷ್ಟು ಸಮಯ ಅಲ್ಲೇ ಇದ್ದ ಮೊಸಳೆ ಮತ್ತೆ ನದಿಗೆ ಇಳಿದಿದೆ.ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆ ಕಂಡುಬಂದ ಸ್ಥಳಕ್ಕೆ ಹೋಗಲು ಹೆಚ್ಚಿನ ನೀರ ಹರಿವು ಹಾಗೂ ಸ್ಥಳದಲ್ಲಿ ಹೂಳು ತುಂಬಿರುವುದು ಅಡ್ಡಿಯಾಗಿದ್ದು ಮೊಸಳೆ ಇಲ್ಲಿಂದ ಯಾವ ಪ್ರದೇಶಕ್ಕೆ ಹೋಗಿದೆ ಎಂಬುದು ತಿಳಿದು ಬಂದಿಲ್ಲ.ಕಳೆದ ಮೂರು-ನಾಲ್ಕು ದಿನಗಳಿಂದ ನೇತ್ರಾವತಿ, ಮೃತ್ಯುಂಜಯ ನದಿ ಪ್ರದೇಶದ ಅಲ್ಲಲ್ಲಿ ಮೊಸಳೆ ಕಂಡು ಬಂದಿರುವ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.ಮುಂಡಾಜೆ ಕಲ್ಮಂಜ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರಿಕೆ ವಹಿಸಬೇಕಾಗಿದೆ.

Related posts

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya
error: Content is protected !!