July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಕೈಯ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ವಿಶ್ವದಾದ್ಯಂತ ಅನೇಕ ಮಕ್ಕಳು ಕೈಯ ಅಸುರಕ್ಷತೆಯಿಂದಾಗಿ ನ್ಯೂಮೇನಿಯಾ ಡಯೇರಿಯಾದಿಂದ ಸಾವನ್ನಪ್ಪುತ್ತಿದ್ದಾರೆ. ಕೊರೋನ ಇತ್ಯಾದಿಗಳು ಕಾಯಿಲೆಗಳು ಕೆಲವು ವೈರಸ್ ಹಾಗೂ ಬ್ಯಾಕ್ಟೀರಿಯಗಳಿಂದ ಬರುವುದರಿಂದ ಕೈಯ ಸುರಕ್ಷತೆ ಅತಿ ಮುಖ್ಯವಾಗಿದೆ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದ ವೈಜ್ಞಾನಿಕ ಕ್ರಮದಿಂದ ಕೈಯನ್ನು ತೊಳೆದುಕೊಳ್ಳಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಸಂಘ , ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶ , ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಾಂಸ್ಕೃತಿಕ ಸಮಿತಿಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಅಂಗವಾಗಿ ವೈಜ್ಞಾನಿಕವಾಗಿ ಕೈ ತೊಳೆಯುವ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಆಹಾರ ತಿನ್ನುವ ಮೊದಲು ಹಾಗೂ ಆನಂತರ , ಪ್ರಾಣಿಗಳನ್ನು ಮುಟ್ಟಿದಾಗ , ಶೌಚ ಹಾಗೂ ಮೂತ್ರಾದಿಗಳ ವಿಸರ್ಜನೆಯ ಬಳಿಕ ಅಗತ್ಯವಾಗಿ ಸೋಪು ಉಪಯೋಗಿಸಿ ಕೈ ತೊಳೆದುಕೊಳ್ಳಬೇಕೆಂದು ಈ ಸಂದರ್ಭದಲ್ಲಿ ನುಡಿದರು.

ಅಭ್ಯಾಗತರಾಗಿ ಆಗಮಿಸಿದ ಸಾಂಸ್ಕೃತಿಕ ಸಮಿತಿಯ ಸಂಯೋಜಕ ಹಾಗೂ ಹಿಂದಿ ಭಾಷಾ ವಿಭಾಗದ ಮುಖ್ಯಸ್ಥ ನಾಗರಾಜ್ ಭಂಡಾರಿ ಅವರು ಮಾತನಾಡಿ ಕೊರೋನದ ಅನಂತರ ಎಲ್ಲರಿಗೂ ಕೈ ಸುರಕ್ಷತೆ ಬಗ್ಗೆ ಹೆಚ್ಚು ಅರಿವಿಗೆ ಬಂದಿತು. ಅನೇಕ ವರ್ಷಗಳಿಂದ ಇಂತಹ ಅರಿವಿನ ಕಾರ್ಯಕ್ರಮ ನಮ್ಮ ಕಾಲೇಜಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.

ಸಂಸ್ಕೃತ ಸಂಘದ ಅಧ್ಯಕ್ಷೆ ಹಂಸಿನೀ ಭಿಡೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ಸ್ವಾಗತಿಸಿ , ಎಸ್ ಎಸ್ ಎಸ್ ಸ್ವಯಂ ಸೇವಕಿ ಪ್ರಣಮ್ಯಾ ಜಿ.ಕೆ ವಂದಿಸಿದರು.

Related posts

ಕಲ್ಮಂಜ: ಕೃಷಿಕ ಶೀನ ಶೆಟ್ಟಿ ನಿಧನ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya
error: Content is protected !!